AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ

ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ
ನವೀನ್‌ ರೈ
ರಮೇಶ್ ಬಿ. ಜವಳಗೇರಾ
|

Updated on: May 19, 2023 | 6:52 AM

Share

ಮಂಗಳೂರು: ಸುಳ್ಯದ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನವೀನ್‌ ರೈ (52)ಮೇನಾಲ ಗುರುವಾರ ಪಯಸ್ವಿನಿ ಹೊಳೆಯಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ನವೀನ್ ತುದಿಯಾಡ್ಕ ಬಳಿ ಇರುವ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ಪಂಪ್ ಸ್ಟಾರ್ಟ್ ಆಗದ ಕಾರಣ ಫುಟ್​ವಾಲ್​ನಲ್ಲಿ ಏನೋ ಸಮಸ್ಯೆ ಇದೆಯಂದು ಪರಿಶೀಲಿಸಲು ನದಿಗೆ ಇಳಿದಿದ್ದರು. ಆ ಸಂದರ್ಭದಲ್ಲಿ ಆಯ ತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಳಿನ್, ಡಿವಿ ಚಿತ್ರಕ್ಕೆ ಚಪ್ಪಲಿ ಹಾಕಿದ್ದವರಿಗೆ ಮನಸೋ ಇಚ್ಚೆ ಥಳಿತ: ಪುತ್ತೂರು ಗ್ರಾಮಾಂತರ ಠಾಣೆ ಸಬ್ ಇನ್ಸ್‌ಪೆಕ್ಟರ್, ಪೇದೆ ಅಮಾನತು

ನವೀನ್‌ ರೈ ಯವರ ಮನೆ ಮೇನಾಲದಲ್ಲಿದ್ದು, ಪಕ್ಕದಲ್ಲಿಯೇ ಕೃಷಿ ತೋಟವಿದೆ. ಅದರ ಇನ್ನೊಂದು ಪಾಶ್ರ್ವದಲ್ಲಿ ಪಯಸ್ವಿನಿ ಹೊಳೆಗೆ ನೀರಿನ ಪಂಪ್‌ ಅಳವಡಿಲಾಗಿದ್ದು, ಅಲ್ಲಿಗೆ ತುದಿಯಡ್ಕ ಮೂಲಕ ಸಾಗಬೇಕಾಗಿದೆ. ನವೀನ್‌ ರೈಯವರು ಆಗಾಗ ಇಲ್ಲಿಗೆ ಬಂದು ಹೋಗುತ್ತಿರುತ್ತಾರೆ. ಅದರಂತೆ ಗುರುವಾರ ಗಿರಿಜಾಶಂಕರ್‌ ತುದಿಯಡ್ಕ ಅವರ ಮನೆಯ ಬಳಿ ಬೈಕ್‌ ನಿಲ್ಲಿಸಿ ಪುಟ್‌ವಾಲ್‌ನಲ್ಲಿರುವ ಕಸ ತೆಗೆಯಲೆಂದು ಅಲ್ಲಿಗೆ ಹೋಗಿದ್ದರು. ನದಿಯ ದಡದಲ್ಲಿ ಮೊಬೈಲ್‌, ವಾಚ್‌ ಮತ್ತಿತರ ಸಾಮಾನುಗಳನ್ನಿರಿಸಿ ನದಿಗಿಳಿದಿದ್ದರು. ಬಹಳ ಹೊತ್ತಾದರೂ ನವೀನ್‌ ರೈಯವರು ಮರಳಿ ಬಾರದ್ದರಿಂದ ಪರಿಸರದಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರು ಗಿರಿಜಾಶಂಕರ್‌ ಅವರ ಪತ್ನಿಗೆ ವಿಷಯ ತಿಳಿಸಿದ್ದಾರೆ.

ಸುಳ್ಯದ ಸಭೆಯೊಂದರಲ್ಲಿದ್ದ ಗಿರಿಜಾಶಂಕರ್‌ರವರಿಗೆ ಪತ್ನಿ ಕೂಡಲೇ ಬರುವಂತೆ ಮಾಡಿದ್ದರು. ಅದಾಗಲೇ ನವೀನ್‌ ರೈ ನಾಪತ್ತೆಯಾಗಿರುವ ವಿಚಾರ ಪ್ರಚಾರಗೊಂಡಿತ್ತು. ಪೈಚಾರಿನ ಮುಳುಗು ತಜ್ಞರಿಗೂ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಮುಳುಗು ತಜ್ಞರಾದ ಆರ್‌.ಬಿ.ಬಶೀರ್‌, ಶರೀಫ್‌ ಟಿ.ಎ., ಅಬ್ಬಾಸ್‌ ಶಾಂತಿನಗರ, ಲತೀಫ್‌ ಬೊಳುಬೈಲು, ಲತೀಫ್‌ ಟಿ.ಎ. ಮೊದಲಾದವರು ಹೊಳೆಗಿಳಿದು ಅರ್ಧ ಗಂಟೆ ಶೋಧ ನಡೆಸಿದಾಗ ಸ್ವಲ್ಪ ದೂರದ ಆಳದಲ್ಲಿ ನವೀನ್‌ ರೈಯವರ ಮೃತದೇಹ ಪತ್ತೆಯಾಗಿದೆ.

ಬಳಿಕ ಸುಳ್ಯದ ಸರ್ಕಾರಿ ಆಸ್ಪತ್ರೆತಲ್ಲಿ ಮೃತ ದೇಹದ ಪೋಸ್ಟ್ ಮಾರ್ಟಂ ಬಳಿಕ ಅಂಬ್ಯುಲೆನ್ಸ್​ನಲ್ಲಿ ಮೇನಾಲದ ಮನೆಗೆ ತೆಗೆದುಕೊಂಡು ಹೋಗುವ ಮಾರ್ಗ ಮಧ್ಯೆ ಬಿಜೆಪಿ ಕಚೇರಿ ಬಳಿ ನಿಲ್ಲಿಸಲಾಯ್ತು. ಈ ವೇಳೆ ಕಾರ್ಯಕರ್ತರು ನವೀನ್ ಮೃತ ದೇಹಕ್ಕೆ ಅಂತಿಮ ನಮನ ಸಲ್ಲಿಸಿದರು.

ಪ್ರಭಾವಿ ಬಿಜೆಪಿ ಮುಖಂಡರಾಗಿರುವ ನವೀನ್‌ ರೈ ಮೇನಾಲ ಜಾಲ್ಸೂರು ಜಿ.ಪಂ. ಕ್ಷೇತ್ರದ ಮಾಜಿ ಸದಸ್ಯರು. ಅಜ್ಜಾವರ ಗ್ರಾ.ಪಂ.ನ ಮಾಜಿ ಸದಸ್ಯರು. ಕಲ್ಲಿನ ಕೋರೆಯನ್ನು ಕೂಡಾ ಹೊಂದಿದ್ದು, ಉದ್ಯಮಿಯಾಗಿಯೂ ಪ್ರಸಿದ್ಧರಾಗಿದ್ದರು. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಿದ್ದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ