AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಕೆಂಪುಕೋಟೆಯ ಮೇಲೆ, ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನು ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ
ಹರೀಶ್ ಪೂಂಜಾ
TV9 Web
| Edited By: |

Updated on:Mar 01, 2022 | 2:42 PM

Share

ಮಂಗಳೂರು: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣದ ವಿಡಿಯೋ ತುಣುಕು ವೈರಲ್ ಆಗಿದೆ. ದಕ್ಷಿಣ ಕನ್ನಡ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.

ಕೆ.ಎಸ್. ಈಶ್ವರಪ್ಪ ಈ ಹೇಳಿಕೆ ನೀಡಿದ್ರು ಅಂತ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ, ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸೋದು ಸಿದ್ದ. ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜವನ್ನ ಹಾರಿಸುತ್ತೇವೆ. ಭಗವಾಧ್ವಜ ಹಾರಿಸೋದನ್ನ ಯಾರಿಂದಲೂ ತಪ್ಪಿಸಲಾಗಲ್ಲ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಹೇಳಿಕೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ವೈರಲ್ ಆಗಿದೆ. ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆ ಆಗಿದೆ. ಕೆಂಪುಕೋಟೆಯ ಮೇಲೆ, ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನು ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಾಧ್ಬಜ ಎದುರಿಟ್ಟು ಹೋರಾಟ ಮಾಡಿದ್ರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಾಧ್ವಜ ಆಗಿತ್ತು ಎಂದು ಪೂಂಜಾ ಹೇಳಿದ್ದಾರೆ.

ಇದನ್ನೂ ಓದಿ: ಆಳಂದ ಚಲೋ ಹಿನ್ನೆಲೆ: ಕಲಬುರಗಿಯ ಕೆಲವೆಡೆ ನಿಷೇಧಾಜ್ಞೆ; ಜಿಲ್ಲೆಗೆ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ನಿರ್ಬಂಧ

ಇದನ್ನೂ ಓದಿ: ಜಾತ್ಯತೀತತೆ ಉಳಿಯಲು ಹಿಂದೂಗಳು ಬಹುಸಂಖ್ಯೆಯಲ್ಲಿರಬೇಕು: ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ

Published On - 12:41 pm, Tue, 1 March 22

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು