AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Barry Bhavana: ತೊಕ್ಕೊಟ್ಟು ಜಂಕ್ಷನ್ ಬಳಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಬಿಜೆಪಿ ಕಾರ್ಯಕರ್ತರ ವಿರೋಧ

ಬಿಜೆಪಿ ಸರಕಾರವೇ ಇರುವಾಗ ಬಿಜೆಪಿ ಕಾರ್ಯಕರ್ತರೇ ಸೇರಿಕೊಂಡು ಪ್ರತಿಭಟಿಸುತ್ತಿರುವುದು ಹಾಸ್ಯಾಸ್ಪದ. ಪ್ರತಿಭಟಿಸುವ ಬದಲು, ತಮ್ಮ ಸರಕಾರದ ಮೂಲಕ ಯೋಜನೆಯನ್ನು ನಿಲ್ಲಿಸಬಹುದಲ್ಲವಾ? ಅಂತಾ ಶಾಸಕ ಯು.ಟಿ ಖಾದರ್ ಲೇವಡಿ ಮಾಡಿದ್ದಾರೆ.

Barry Bhavana: ತೊಕ್ಕೊಟ್ಟು ಜಂಕ್ಷನ್ ಬಳಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಬಿಜೆಪಿ ಕಾರ್ಯಕರ್ತರ ವಿರೋಧ
ತೊಕ್ಕೊಟ್ಟು ಜಂಕ್ಷನ್ ಬಳಿ ಬ್ಯಾರಿ ಭವನ ಶಿಲನ್ಯಾಸಕ್ಕೆ ವಿರೋಧ
TV9 Web
| Edited By: |

Updated on:Feb 26, 2022 | 1:31 PM

Share

ಮಂಗಳೂರು: ಮಂಗಳೂರು ಹೊರವಲಯದ ತೊಕ್ಕಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಈ ಶಿಲನ್ಯಾಸಕ್ಕೆ ವಿರೋಧ ವ್ಯಕ್ತವಾಗಿದೆ. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಈ ವಿರೋಧ ವ್ಯಕ್ತವಾಗಿದೆ. ಬಿಜೆಪಿ- ಹಿಂದೂ ಸಂಘಟನೆ ಕಾರ್ಯಕರ್ತರು ಶಿಲನ್ಯಾಸಕ್ಕೆ ವಿರೋಧ ತೋರಿದ್ದಾರೆ. ಸ್ಥಳೀಯ ಶಾಸಕ ಯು.ಟಿ. ಖಾದರ್ ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ನಡೆದಿದೆ.

ಬಿಜೆಪಿ ಸರಕಾರವೇ ಇರುವಾಗ ಬಿಜೆಪಿ ಕಾರ್ಯಕರ್ತರೇ ಸೇರಿಕೊಂಡು ಪ್ರತಿಭಟಿಸುತ್ತಿರುವುದು ಹಾಸ್ಯಾಸ್ಪದ. ಪ್ರತಿಭಟಿಸುವ ಬದಲು, ತಮ್ಮ ಸರಕಾರದ ಮೂಲಕ ಯೋಜನೆಯನ್ನು ನಿಲ್ಲಿಸಬಹುದಲ್ಲವಾ? ಅಂತಾ ಶಾಸಕ ಯು.ಟಿ ಖಾದರ್ ಲೇವಡಿ ಮಾಡಿದ್ದಾರೆ. ಶಿಲನ್ಯಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿಯಿತ್ತು.

ಮಸ್ಕಿಯಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಬೆಂಗಳೂರಿನಿಂದ ಮಸ್ಕಿಗೆ ತೆರಳಿ ಕೊಂದಿದ್ದ ಆರೋಪಿ! ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಭೂಮಿಕಾ (15) ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮದುವೆಯಾಗುವುದಕ್ಕೆ ನಿರಾಕರಿಸಿದ ಹಿನ್ನೆಲೆ ಸೋದರತ್ತೆಯ ಪುತ್ರಿ ಭೂಮಿಕಾಗೆ ಚಾಕು ಇರಿದು ರಮೇಶ್ (28) ಎಂಬಾತ ಹತ್ಯೆಗೈದಿದ್ದಾನೆ. ನಿರ್ಜನ ಪ್ರದೇಶಕ್ಕೆ ಭೂಮಿಕಾಳನ್ನು ಕರೆದೊಯ್ದು ಕಿರುಕುಳ ನೀಡಿ ಹತ್ಯೆ ಮಾಡಿದ್ದಾನೆ.

ಸೋದರ ಅತ್ತೆ ಮಗಳಾಗಿದ್ದ ಭೂಮಿಕಾಳನ್ನು ಆರೋಪಿ ರಮೇಶ್ ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ. ಈ ಮಧ್ಯೆ ರಮೇಶ್ ಜೊತೆ ಭೂಮಿಕಾಳ ಮದುವೆಗೆ ನಿರಾಕರಣೆ ಕೇಳಿಬಂದಿದೆ. ಸಗೋತ್ರದ ನೆಪ ಹೇಳಿ ಭೂಮಿಕಾ ಕುಟುಂಬಸ್ಥರು ಮದುವೆಗೆ ನಿರಾಕರಿಸಿದ್ದರು. ನಿನ್ನೆ ಬೆಂಗಳೂರಿನಿಂದ ಮಸ್ಕಿಗೆ ಬಂದಿದ್ದ ರಮೇಶ ಶಾಲೆಗೆ ಹೋಗಿದ್ದ ಭೂಮಿಕಾಳನ್ನು ಕರೆದು ತರ್ತಿನಿ ಅಂತಾ ಹೋಗಿದ್ದ. ಆಗ ಭೂಮಿಕಾಳನ್ನು ಗಿಡಗಂಟೆಗಳಿರುವ ಪ್ರದೇಶಕ್ಕೆ ಕರೆದೊಯ್ದು ಟಾರ್ಚರ್ ಮಾಡಿ, ಮದುವೆಯಾಗುವಂತೆ ಪೀಡಿಸಿದ್ದಾನೆ. ಬಳಿಕ ಚಾಕುವಿನಿಂದ ಇರಿದಿದ್ದಾನೆ. ನಿರ್ಜನ ಪ್ರದೇಶದಿಂದ ಮುಖ್ಯ ರಸ್ತೆಗೆ ಓಡಿ ಬಂದು ಒದ್ದಾಡಿ ಪ್ರಾಣಬಿಟ್ಟಿದ್ದಳು ಭೂಮಿಕಾ. ಈ ಸಂಬಂಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ್ಯಸಿಡ್ ಕುಡಿಸಿ ರಾಡ್‌ನಿಂದ ಹೊಡೆದು ಅಕ್ಕಸಾಲಿಗನ ಕೊಲೆ ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಬಳಿ ಅಕ್ಕಸಾಲಿಗರೊಬ್ಬರಿಗೆ ಆ್ಯಸಿಡ್ ಕುಡಿಸಿ, ರಾಡ್‌ನಿಂದ ಹೊಡೆದು ಕೊಲೆ ಮಾಡಲಾಗಿದೆ. ಕಲಬುರಗಿಯ ಶಹಬಜಾರ್ ಕಬಾಡ್ ಗಲ್ಲಿ ನಿವಾಸಿ ವಿಜಯಕುಮಾರ್ ಶಿಲವಂತ (38) ಹತ್ಯೆಗೀಡಾದವರು. ಶುಕ್ರವಾರ ಮಧ್ಯಾಹ್ನ ವಿಜಯಕುಮಾರ್ ಚಿನ್ನಾಭರಣ ತರಲು ಹಲಕರ್ಟಿ ಗ್ರಾಮಕ್ಕೆ ಹೋಗಿದ್ದರು.

ಈ ವೇಳೆ ದುಷ್ಕರ್ಮಿಗಳು ವಿಜಯಕುಮಾರ್​​ರನ್ನು ಅಡ್ಡಗಟ್ಟಿ ಹಣ ದೋಚಿದ್ದಾರೆ. ಹಣ ದೋಚಿದ್ದೂ ಅಲ್ಲದೆ, ಅವರಿಗೆ ಆ್ಯಸಿಡ್ ಕುಡಿಸಿ, ರಾಡ್‌ನಿಂದ ಹೊಡೆದು ಪರಾರಿಯಾಗಿದ್ದಾರೆ. ಆದರೆ ಸ್ಥಳೀಯರು ವಿಜಯಕುಮಾರ್​​ರನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ವಿಜಯಕುಮಾರ್ ಕೊನೆಯುಸಿರೆಳೆದಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿನ ವಿದ್ಯಮಾನ ಒಳ್ಳೆಯದಲ್ಲ: ಶಾಲಾ ಕಾಲೇಜುಗಳಲ್ಲಿ ಜಾತಿ ಮತ ಇರುವುದಿಲ್ಲ, ಎಲ್ಲರೂ ಒಂದೇ- ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ನಾಯ್ಡು

ಇದನ್ನೂ ಓದಿ: Online cheating: ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುತ್ತಿದ್ದ ಖತರ್ನಾಕ್​ ಆಸಾಮಿಗಳು ಅರೆಸ್ಟ್

Published On - 1:26 pm, Sat, 26 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್