AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Nettar: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

Praveen Nettar: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಮೃತ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು
TV9 Web
| Edited By: |

Updated on:Aug 09, 2022 | 7:42 PM

Share

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್.ಸಿ.ಎ(33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಹಿನ್ನೆಲೆ ಬಂಧಿಸಲಾಗಿದೆ. ಈವರೆಗೆ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ.

ಜುಲೈ 28ರಂದು ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಜಾಕೀರ್​ನನ್ನು ಬಂಧಿಸಿಲಾಗಿತ್ತು. ಅಗಸ್ಟ್ 1ರಂದು ಪಲ್ಲಿ ಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರಿಸ್​ನನ್ನು ಬಂಧಿಸಲಾಗಿದೆ. ಅಗಸ್ಟ್ 07 ರಂದು ಸುಳ್ಯದ ನಾವೂರು ನಿವಾಸಿ ಅಬೀದ್(22) ಮತ್ತು ಬೆಳ್ಳಾರೆ ನಿವಾಸಿ ನೌಫಲ್(28) ನನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಏಳನೇ ಆರೋಪಿಯಾಗಿ ಅಬ್ದುಲ್ ಕಬೀರ್ ಸಿ.ಎ(33) ನನ್ನು ಬಂಧಿಸಲಾಗಿದೆ. ಹತ್ಯೆಯಲ್ಲಿ ನೇರ ಭಾಗಿಯಾದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಆಗಸ್ಟ್​ 7 ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು, ಅಬೀದ್ (22), ನೌಫಾಲ್ (28) ಬಂಧಿತ ಆರೋಪಿಗಳು. ಅಬಿದ್​ ನಾವೂರು ನಿವಾಸಿ ಯಾಕೂಬ್ ಮಗ. ನೌಫಾಲ್ ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಮಗನಾಗಿದ್ದಾನೆ. ಹಂತಕರು ಕೊಲೆ ಮಾಡಲು ಅಬೀದ್ ಬಳಿ ಇದ್ದ ಕೇರಳ ರಿಜಿಸ್ಟ್ರೇಷನ್​ ಬೈಕ್​ನ್ನು ಬಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಅದೇ ಬೈಕ್​​ನಲ್ಲಿ ಬಂದು ಕೊಲೆ ಮಾಡಿ ಮೂವರು ಹಂತಕರು ಹೋಗಿದ್ದಾರೆ ಎಂದು ಆರೋಪವಿದೆ.  ಅಬೀದ್​​  ಮತ್ತು ನೌಫಾಲ್​​ಗೆ ಹಂತಕರ ಜೊತೆ ನೇರಾನೇರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ಹಂತಕರಿಗೆ ಪ್ರವೀಣ್ ಅಂಗಡಿ ಬಗ್ಗೆ ನೌಫಾಲ್ ಮಾಹಿತಿ ನೀಡಿದ್ದ ಎಂದು ಹೇಳಲಾಗುತ್ತಿದೆ.  ಅಂಗಡಿ ಬಳಿ ಬಂದು ಪ್ರವೀಣ್ ಇದ್ದಾನಾ ಇಲ್ವಾ ಅಂತಾ  ನೌಫಾಲ್​ನದ್ದು ಮಾಹಿತಿ ಕೊಡೊ ಕೆಲಸ ಮಾಡಿದ್ದಾನೆ. ನೌಫಾಲ್ ಸ್ಥಳೀಯನೇ ಆಗಿದ್ದರಿಂದ ಅಲ್ಲಿನ ಸಂಪೂರ್ಣ ಮಾಹಿತಿ ಸಿಗುತ್ತಿತ್ತು‌ ಎಂದು ಆರೋಪಿಸಲಾಗುತ್ತಿತ್ತು.

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು:

ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗೊ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು ರೂಪಿಸಿದ್ದು, ಅಂದು ಆ ಮೂವರ ತಂಡದಲ್ಲಿ ಅಬೀದ್ ಕೂಡ ಇದ್ದ ಎಂದು ಹೇಳಲಾಗಿದೆ.

ವಿಚಾರಣೆ ವೇಳೆ ಪೊಲೀಸರಿಗೆ ಅಬೀದ್ ಹೇಳಿಕೆ‌ ನೀಡಿದ್ದು, ಅಂದು ಕೊಲೆ ಮಾಡಲು ಇಬ್ಬರ ಜೊತೆ ಅಬೀದ್ ಹೋಗಿದ್ದು, ಅಂಗಡಿ ಬಳಿ ಪ್ರವೀಣ್ ಇದ್ದಾನ ಇಲ್ವಾ ಅಂತಾ ನೋಡಲು  ನೌಫಾಲ್ ಹೋಗಿದ್ದ. ಅವತ್ತು ಪ್ರವೀಣ್ ಅಂಗಡಿಯಲ್ಲಿ ಇರಲಿಲ್ಲ‌. ಪ್ರವೀಣ್ ಅಂಗಡಿಯಲ್ಲಿ ಇಲ್ಲ ಅಂತಾ ನೌಫಾಲ್‌ ಮಾಹಿತಿ ನೀಡಿದ್ದನು.

Published On - 7:32 pm, Tue, 9 August 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್