AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್

mangaluru city corporation mayor and deputy mayor Election 2023 ಮಂಗಳೂರು ನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಇನ್ನು ಮೇಯರ್​ ಹಾಗೂ ಉಪಮೇಯರ್​ಗೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸನ್ಮಾನಿಸಿ ಅಭಿನಂದಿಸಿದರು.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್
ನೂತನ ಮೇಯರ್-ಉಪಮೇಯರ್​ಗೆ ಕಟೀಲ್ ಅಭಿನಂದನೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 08, 2023 | 2:57 PM

Share

ಮಂಗಳೂರು, (ಸೆಪ್ಟೆಂಬರ್, 08): ಮಂಗಳೂರು ನಗರ ಪಾಲಿಕೆಯ (mangaluru city corporation) 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ಸದಸ್ಯ ಮೇಯರ್ ಆಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರದ ಸದಸ್ಯ ಸುಧೀರ್ ಶೆಟ್ಟಿ ಅವರಿಗೆ ಮೇಯರ್​ ಹುದ್ದೆ ಒಲಿದುಬಂದಿದೆ. ಇನ್ನು ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಬೂರು ವಾರ್ಡ್​ನ ಸುನೀತಾ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸುಧೀರ್ ಶೆಟ್ಟಿ ಅವರು ಮೂರನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದು, ಈ ಹಿಂದೆ ಮುಖ್ಯ ಸಚೇತಕರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಕಳೆದ ವರ್ಷ ಮೇಯರ್ ಚುನಾವಣೆ ವೇಳೆ ಸುಧೀರ್ ಅವರ ಹೆಸರು ಕೇಳಿಬಂದಿತ್ತು. ಆದ್ರೆ, ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಲ್ಲವ ಸಮುದಾಯಕ್ಕೆ ಆದ್ಯತೆ ನೀಡಿದ್ದ ಬಿಜೆಪಿ, ಜಯಾನಂದ ಅಂಚನ್​ ಅವರಿಗೆ ಮಣೆ ಹಾಕಿತ್ತು.

ಈ ಅವಧಿಯ ನಾಲ್ಕನೇ ಮೇಯರ್​ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟ 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14, ಹಾಗೂ ಎಸ್​ಡಿಪಿಐ 2 ಸ್ಥಾನಗಳನ್ನು ಹೊಂದಿದೆ.

ಇನ್ನಷ್ಟು ನಿಮ್ಮ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Fri, 8 September 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ