AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್

mangaluru city corporation mayor and deputy mayor Election 2023 ಮಂಗಳೂರು ನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಇನ್ನು ಮೇಯರ್​ ಹಾಗೂ ಉಪಮೇಯರ್​ಗೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸನ್ಮಾನಿಸಿ ಅಭಿನಂದಿಸಿದರು.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್
ನೂತನ ಮೇಯರ್-ಉಪಮೇಯರ್​ಗೆ ಕಟೀಲ್ ಅಭಿನಂದನೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on:Sep 08, 2023 | 2:57 PM

Share

ಮಂಗಳೂರು, (ಸೆಪ್ಟೆಂಬರ್, 08): ಮಂಗಳೂರು ನಗರ ಪಾಲಿಕೆಯ (mangaluru city corporation) 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ಸದಸ್ಯ ಮೇಯರ್ ಆಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರದ ಸದಸ್ಯ ಸುಧೀರ್ ಶೆಟ್ಟಿ ಅವರಿಗೆ ಮೇಯರ್​ ಹುದ್ದೆ ಒಲಿದುಬಂದಿದೆ. ಇನ್ನು ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಬೂರು ವಾರ್ಡ್​ನ ಸುನೀತಾ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸುಧೀರ್ ಶೆಟ್ಟಿ ಅವರು ಮೂರನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದು, ಈ ಹಿಂದೆ ಮುಖ್ಯ ಸಚೇತಕರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಕಳೆದ ವರ್ಷ ಮೇಯರ್ ಚುನಾವಣೆ ವೇಳೆ ಸುಧೀರ್ ಅವರ ಹೆಸರು ಕೇಳಿಬಂದಿತ್ತು. ಆದ್ರೆ, ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಲ್ಲವ ಸಮುದಾಯಕ್ಕೆ ಆದ್ಯತೆ ನೀಡಿದ್ದ ಬಿಜೆಪಿ, ಜಯಾನಂದ ಅಂಚನ್​ ಅವರಿಗೆ ಮಣೆ ಹಾಕಿತ್ತು.

ಈ ಅವಧಿಯ ನಾಲ್ಕನೇ ಮೇಯರ್​ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟ 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14, ಹಾಗೂ ಎಸ್​ಡಿಪಿಐ 2 ಸ್ಥಾನಗಳನ್ನು ಹೊಂದಿದೆ.

ಇನ್ನಷ್ಟು ನಿಮ್ಮ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Fri, 8 September 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ