AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್

mangaluru city corporation mayor and deputy mayor Election 2023 ಮಂಗಳೂರು ನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಇನ್ನು ಮೇಯರ್​ ಹಾಗೂ ಉಪಮೇಯರ್​ಗೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸನ್ಮಾನಿಸಿ ಅಭಿನಂದಿಸಿದರು.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್
ನೂತನ ಮೇಯರ್-ಉಪಮೇಯರ್​ಗೆ ಕಟೀಲ್ ಅಭಿನಂದನೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 08, 2023 | 2:57 PM

Share

ಮಂಗಳೂರು, (ಸೆಪ್ಟೆಂಬರ್, 08): ಮಂಗಳೂರು ನಗರ ಪಾಲಿಕೆಯ (mangaluru city corporation) 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ಸದಸ್ಯ ಮೇಯರ್ ಆಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರದ ಸದಸ್ಯ ಸುಧೀರ್ ಶೆಟ್ಟಿ ಅವರಿಗೆ ಮೇಯರ್​ ಹುದ್ದೆ ಒಲಿದುಬಂದಿದೆ. ಇನ್ನು ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಬೂರು ವಾರ್ಡ್​ನ ಸುನೀತಾ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸುಧೀರ್ ಶೆಟ್ಟಿ ಅವರು ಮೂರನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದು, ಈ ಹಿಂದೆ ಮುಖ್ಯ ಸಚೇತಕರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಕಳೆದ ವರ್ಷ ಮೇಯರ್ ಚುನಾವಣೆ ವೇಳೆ ಸುಧೀರ್ ಅವರ ಹೆಸರು ಕೇಳಿಬಂದಿತ್ತು. ಆದ್ರೆ, ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಲ್ಲವ ಸಮುದಾಯಕ್ಕೆ ಆದ್ಯತೆ ನೀಡಿದ್ದ ಬಿಜೆಪಿ, ಜಯಾನಂದ ಅಂಚನ್​ ಅವರಿಗೆ ಮಣೆ ಹಾಕಿತ್ತು.

ಈ ಅವಧಿಯ ನಾಲ್ಕನೇ ಮೇಯರ್​ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟ 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14, ಹಾಗೂ ಎಸ್​ಡಿಪಿಐ 2 ಸ್ಥಾನಗಳನ್ನು ಹೊಂದಿದೆ.

ಇನ್ನಷ್ಟು ನಿಮ್ಮ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Fri, 8 September 23

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್