AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶಗಳು ಬಂದಿದ್ದವು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದಾದ ಬಳಿಕ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

Bomb Threat: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 04, 2024 | 4:12 PM

Share

ಮಂಗಳೂರು, ಮೇ 04: ಬೆಂಗಳೂರಿನ (Bengaluru) ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಕರೆ ಜನಮನದಿಂದ ಮಾಸುವ ಮುನ್ನವೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Mangaluru International Airport) ಕಚೇರಿಗೆ ಇ-ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶ (Bomb Threat) ಬಂದಿದೆ. ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು, ” ವಿಮಾನ ನಿಲ್ದಾಣದ ಆವರಣದಲ್ಲಿ​​​ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಏಪ್ರಿಲ್​ 29 ರಂದು ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟೇಲ್​​​ಗೆ ಬಾಂಬ್​ ಬೆದರಿಕೆ

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿತ್ತು. ಕೂಡಲೆ  ಹೊಟೇಲ್​ಗೆ ತೆರಳಿದ್ದ ಜಾಲಹಳ್ಳಿ ಠಾಣೆ ಪೊಲೀಸರು ಹೋಟೆಲ್​ನಲ್ಲಿದ್ದ ಗ್ರಾಹಕರನ್ನು ಹೊರಕಳಿಸಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಎಲ್ಲರೂ ಇಸ್ಲಾಂಗೆ ಮತಾಂತರವಾಗಿ, ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿ: ಇದು ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Sat, 4 May 24

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ