AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ನಲ್ಲಿ ಘೋಷಣೆಯಾಗದ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ; ಬಿಲ್ಲವ ಮುಖಂಡರ ಆಕ್ರೋಶ

ಜ.29 ಕ್ಕೆ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಸಮಾವೇಶ ನಡೆಸುವ ನಿರ್ಧಾರವಾಗಿತ್ತು. ಆದre ಸಮಾಜದ ಸಚಿವರುಗಳು ಬಿಲ್ಲವ ಅಭಿವೃದ್ಧಿ ನಿಗಮ ಸ್ಥಾಪಿಸುವ ಭರವಸೆ ನೀಡಿದ್ದರು. ಅಷ್ಟಾಗಿಯೂ ಬಜೆಟ್​ನಲ್ಲಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿರುವುದು ಸಮುದಾಯದ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

TV9 Web
| Edited By: |

Updated on:Feb 17, 2023 | 7:54 PM

Share

ಮಂಗಳೂರು: ಕರ್ನಾಟಕ ರಾಜ್ಯ ಬಜೆಟ್​ನಲ್ಲಿ (Karnataka Budget 2023) ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ (Brahmasree Narayana Guru Development Corporation) ಘೋಷಣೆಯಾಗದ ಬಗ್ಗೆ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಲ್ಲವ ಸಮಾಜದ ಮುಖಂಡರು (Billava Community Leaders), ಬಜೆಟ್​ನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡದೆ ಬಿಲ್ಲವ ಈಡಿಗರನ್ನು ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಬಿಲ್ಲವ ಮುಖಂಡ ಪದ್ಮರಾಜ್.ಆರ್ ಮತ್ತು ಬಿಲ್ಲವ ಮುಖಂಡ ಸತ್ಯಜಿತ್‌ ಸುರತ್ಕಲ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಜನವರಿ 29ರಂದು ಸಮಾವೇಶ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಸಮಾಜದ ಸಚಿವರುಗಳು ಬಿಲ್ಲವ ಅಭಿವೃದ್ಧಿ ನಿಗಮ ಸ್ಥಾಪಿಸುವ ಭರವಸೆ ನೀಡಿದ್ದರು. ಜ.5ರಂದು ಬಿಲ್ಲವ ಸಮಾಜದ ಮುಖಂಡರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದರು. ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ್ದರು. ಈ ವೇಳೆ ಮುಖ್ಯಮಂತ್ರಿಯವರು ಮುಂದಿನ ಬಜೆಟ್​ನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಿಸುವ ಭರವಸೆಯನ್ನು ನೀಡಿದ್ದರು ಎಂದು ಪದ್ಮರಾಜ್ ಹೇಳಿದರು.

ಇದನ್ನೂ ಓದಿ: ಕರ್ನಾಟಕ ಬಜೆಟ್​​​ನ ಹಲವು ವಿಶೇಷಗಳು

ಅಭಿವೃದ್ಧಿ ನಿಗಮ ಘೋಷಿಸುವ ಮುಖ್ಯಮಂತ್ರಿಗಳ ಭರವಸೆಯನ್ನು ನಂಬಿ ಎಲ್ಲರೂ ಅಭಿನಂದನೆ ಸಲ್ಲಿಸಿದ್ದರು. ಆದರೆ ಇಂದು ಮುಖಂಡರನ್ನು ಕರೆಸಿಕೊಂಡು ಮೋಸ ಮಾಡಿದ್ದಾರೆ. ಬಜೆಟ್​ನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿಲ್ಲ. ಬಿಲ್ಲವ ಈಡಿಗರನ್ನು ಕಡೆಗಣನೆ ಮಾಡಲಾಗಿದೆ. ರಾಜ್ಯದಲ್ಲಿ ಬಿಲ್ಲವ ಈಡಿಗ ಸಮುದಾಯದ 60 ಲಕ್ಷ ಜನ ಇದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕುದಾದ ಉತ್ತರ ಸಿಗಲಿದೆ. ಸರ್ಕಾರದ ಭಾಗ ಆಗಿರುವ ಸಚಿವರು ಹಾಗೂ ಶಾಸಕರು ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಸತ್ಯಜಿತ್ ಸುರತ್ಕಲ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಲವ ಮುಖಂಡ ಸತ್ಯಜಿತ್‌ ಸುರತ್ಕಲ್, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಆಗದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಅಭಿವೃದ್ಧಿ ನಿಗಮ ಘೋಷಿಸಬೇಕು. 500 ಕೋಟಿ ಅನುದಾನ ನಿಗಮಕ್ಕೆ ಮೀಸಲಿಡಬೇಕು. ಒಂದು ವೇಳೆ ಅಧಿವೇಶನದಲ್ಲಿ ಅಭಿವೃದ್ಧಿ ನಿಗಮ ಘೋಷಣೆ ಮಾಡದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Fri, 17 February 23

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!