ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ಮಂಗಳೂರಿನ ಬೆಂದೂರುವೆಲ್​ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಬಿಲ್ಡರ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 1:00 PM

ದಕ್ಷಿಣ ಕನ್ನಡ, ಆ.6: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ (Mangalore) ಬೆಂದೂರುವೆಲ್​ನಲ್ಲಿ ನಡೆದಿದೆ. ಮೋಹನ್​ ಅಮೀನ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ. ಇದೀಗ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮನೆಯ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನ

ಹಾಸನ: ನಗರದ ವಾರ್ಡ್‌ ನಂಬರ್‌ 35 ಕೆ.ಹೊಸಕೊಪ್ಪಲಿನಲ್ಲಿ ಕಾರು ಕದ್ದು, ಬೈಕ್ ಬಿಟ್ಟು ಹೋದ ಘಟನೆ ನಡೆದಿದೆ. ಅಭಿಷೇಕ್‌ ಎಂಬುವವರಿಗೆ ಸೇರಿದ ಮಾರುತಿ 800 ಕಾರನ್ನು ಜುಲೈ 30 ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಬಂದು ಕಾರಿನ ಡೋರ್ ತೆಗೆದು ಸ್ವಲ್ಪ ದೂರು ಕಾರನ್ನು ತಳ್ಳಿಕೊಂಡು ಹೋಗಿ, ಆ ನಂತರ ಕಾರು ಸ್ಟಾರ್ಟ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಕಾರು ಕದಿಯಲು ಬೈಕ್‌ನಲ್ಲಿ ಬಂದಿದ್ದ ಚೋರರು, ಬೈಕ್‌ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಕಾರು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ಕೆ.ಆರ್.ಪುರಂ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಆರೋಪ

ಮೈಸೂರು: ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಗುಂಡೇಗೌಡ ಪತ್ನಿ ಸುಶೀಲಾ ಹಾಗೂ ಆಕೆಯ ಸಂಬಂಧಿ ಮೇಲೆ, ಗ್ರಾಮದ ಶಿವಣ್ಣ ಹಾಗೂ ಕುಟುಂಬಸ್ಥರಿಂದ ಹಲ್ಲೆ ನಡೆಸಲಾಗಿದೆ. 14 ವರ್ಷಗಳ ಹಿಂದೆ ಶಿವಣ್ಣ, 5 ಲಕ್ಷ ರೂಪಾಯಿಗೆ ಗುಂಡೇಗೌಡ ಎಂಬುವರಿಗೆ ನಿವೇಶನವನ್ನು ಮಾರಾಟ ಮಾಡಿದ್ದರು. 2016ರಿಂದ ನಿವೇಶನ ವಾಪಸ್​ ಕೊಡುವಂತೆ ಗಲಾಟೆ ಮಾಡಲು ಶುರು ಮಾಡಿದ್ದನಂತೆ. ಇದೀಗ ನಿವೇಶನ ಬಳಿ ಇದ್ದ ಗುಂಡೇಗೌಡ ಪತ್ನಿ ಹಾಗೂ ಸಂಬಂಧಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us