ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 1:00 PM

ಮಂಗಳೂರಿನ ಬೆಂದೂರುವೆಲ್​ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಬಿಲ್ಡರ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ
Follow us on

ದಕ್ಷಿಣ ಕನ್ನಡ, ಆ.6: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ (Mangalore) ಬೆಂದೂರುವೆಲ್​ನಲ್ಲಿ ನಡೆದಿದೆ. ಮೋಹನ್​ ಅಮೀನ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ. ಇದೀಗ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮನೆಯ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನ

ಹಾಸನ: ನಗರದ ವಾರ್ಡ್‌ ನಂಬರ್‌ 35 ಕೆ.ಹೊಸಕೊಪ್ಪಲಿನಲ್ಲಿ ಕಾರು ಕದ್ದು, ಬೈಕ್ ಬಿಟ್ಟು ಹೋದ ಘಟನೆ ನಡೆದಿದೆ. ಅಭಿಷೇಕ್‌ ಎಂಬುವವರಿಗೆ ಸೇರಿದ ಮಾರುತಿ 800 ಕಾರನ್ನು ಜುಲೈ 30 ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಬಂದು ಕಾರಿನ ಡೋರ್ ತೆಗೆದು ಸ್ವಲ್ಪ ದೂರು ಕಾರನ್ನು ತಳ್ಳಿಕೊಂಡು ಹೋಗಿ, ಆ ನಂತರ ಕಾರು ಸ್ಟಾರ್ಟ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಕಾರು ಕದಿಯಲು ಬೈಕ್‌ನಲ್ಲಿ ಬಂದಿದ್ದ ಚೋರರು, ಬೈಕ್‌ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಕಾರು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ಕೆ.ಆರ್.ಪುರಂ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಆರೋಪ

ಮೈಸೂರು: ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಗುಂಡೇಗೌಡ ಪತ್ನಿ ಸುಶೀಲಾ ಹಾಗೂ ಆಕೆಯ ಸಂಬಂಧಿ ಮೇಲೆ, ಗ್ರಾಮದ ಶಿವಣ್ಣ ಹಾಗೂ ಕುಟುಂಬಸ್ಥರಿಂದ ಹಲ್ಲೆ ನಡೆಸಲಾಗಿದೆ. 14 ವರ್ಷಗಳ ಹಿಂದೆ ಶಿವಣ್ಣ, 5 ಲಕ್ಷ ರೂಪಾಯಿಗೆ ಗುಂಡೇಗೌಡ ಎಂಬುವರಿಗೆ ನಿವೇಶನವನ್ನು ಮಾರಾಟ ಮಾಡಿದ್ದರು. 2016ರಿಂದ ನಿವೇಶನ ವಾಪಸ್​ ಕೊಡುವಂತೆ ಗಲಾಟೆ ಮಾಡಲು ಶುರು ಮಾಡಿದ್ದನಂತೆ. ಇದೀಗ ನಿವೇಶನ ಬಳಿ ಇದ್ದ ಗುಂಡೇಗೌಡ ಪತ್ನಿ ಹಾಗೂ ಸಂಬಂಧಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ