AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್

ಪಡಿತರ ಚೀಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದ ಹಿನ್ನೆಲೆ ಕೋಪಗೊಂಡ ಯುವಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಸದ್ಯ ಈಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 17, 2024 | 8:24 AM

Share

ಮಂಗಳೂರು, ಜ.17: ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ. ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಬಂಧಿತ ಆರೋಪಿ. ಈತ 12 ವರ್ಷದಿಂದ ಸುರತ್ಕಲ್ ನಲ್ಲಿ ವಾಸವಾಗಿದ್ದಾನೆ.

ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿತ್ತಿರೋ ಆರೋಪಿ ಅನಿಲ್ ಕುಮಾರ್, ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟದ್ದ. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್​ಎಸ್​ಯುಐ ದೂರು ಸ್ವೀಕರಿಸಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ CR.6/24, U/S 153A, 505(I)(C) IPC ಸಕ್ಷನ್ 504 ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ಹಿನ್ನೆಲೆ

ಪಡಿತರ ಚೀಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದ ಹಿನ್ನೆಲೆ ಕೋಪಗೊಂಡ ಯುವಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಿದ್ದ. ಹೀಗಾಗಿ ಈ ಸಂಬಂಧ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಮತ್ತೊಂದು ಕಾಡಾನೆ ಸೆರೆ, ಮುಂದುವರೆದ ಕಾರ್ಯಾಚರಣೆ

ಇನ್ನು ಕಳೆದ ನವೆಂಬರ್​ನಲ್ಲಿ ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ ಹರಿಬಿಟ್ಟಿದ್ದರು. ಬಳಿಕ ಅವರ ಮೇಲೆ ಎಫ್​ಐಆರ್​ ದಾಖಲಾಗಿತ್ತು. ಇದಕ್ಕೂ ಹಿಂದೆ ಸಿಎಂ, ಡಿಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇವರ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:49 am, Wed, 17 January 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?