AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಧ್ವನಿವರ್ಧಕ ವಶ

ಪಬ್​ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಧ್ವನಿವರ್ಧಕ ವಶ
ಸಿಸಿಬಿ ದಾಳಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 24, 2021 | 7:59 AM

Share

ದಕ್ಷಿಣ ಕನ್ನಡ: ನಿಗದಿತ ಸಮಯಕ್ಕಿಂತ ಹೆಚ್ಚು ತೆರೆಯಲಾಗಿದ್ದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಮಂಗಳೂರಿನ ಎಂಜಿ ರಸ್ತೆಯಲ್ಲಿರುವ ಓನೆಕ್ಸ್ ಪಬ್​ನಲ್ಲಿ ಜೋರಾಗಿ ಧ್ವನಿವರ್ಧಕ ಬಳಸಿದ್ದು, ಅಕ್ಕಪಕ್ಕದವರಿಗೆ ಕಿರಿಕಿರಿ ಉಂಟುಮಾಡಿದೆ. ಅಲ್ಲದೇ ಪಬ್​ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್​ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಅಬಕಾರಿ ಕಾಯ್ದೆ, ಕೆಪಿ ಕಾಯ್ದೆ, ಎಪಿಡೆಮಿಕ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಿತ್ರದುರ್ಗ: ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್ ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಬ್ಯಾಂಕ್ ಒಳಗೆ ಕೂಡಿ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಸಹಾರಾ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ತಿರುಪತಿ, ಯುವಕ ವಿಕಾಸ್​ ಮೇಲೆ ದರ್ಪ ತೋರಿದ್ದು, ಬ್ಯಾಂಕಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ನಿನ್ನೆ ಸಂಜೆ 5 ರಿಂದ ರಾತ್ರಿ 9ರವರೆಗೆ ಬ್ಯಾಂಕಲ್ಲೇ ವಿಕಾಸ್ ಬಂಧಿಯಾಗಿದ್ದಾನೆ.

ರಾತ್ರಿ ನಗರ ಪೊಲೀಸರು ಸಹಾರಾ ಇಂಡಿಯಾ ಬ್ಯಾಂಕ್​ಗೆ ಬಂದ ಮೇಲೆ ವಿಕಾಸ್​ನನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮ್ಯಾನೇಜರ್ ತಿರುಪತಿ ಹೇಳುವುದೇ ಬೇರೆ. ಬ್ಯಾಂಕಿನ ವಹಿವಾಟು ವಿಚಾರ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟಿನಲ್ಲಿ ಪ್ರಕರಣ ಇತ್ಯರ್ಥ ಬಳಿಕ ಮೆಚುರಿಟಿ ಹಣ ನೀಡುತ್ತೇವೆ. ಈ ಬಗ್ಗೆ ಮಾಹಿತಿ ನೀಡಿದರೂ ವಿಕಾಸ್ ಹಠ ಹಿಡಿದು ಕುಳಿತರು. ಹೀಗಾಗಿ ಬ್ಯಾಂಕ್ ಸುರಕ್ಷತೆ ದೃಷ್ಟಿಯಿಂದ ಬೀಗ ಹಾಕಿದೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore Crime: ಬೆಂಗಳೂರಿನಲ್ಲಿ ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶಕ್ಕೆ

Published On - 7:25 am, Sun, 24 October 21

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ