AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಧ್ವನಿವರ್ಧಕ ವಶ

ಪಬ್​ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಧ್ವನಿವರ್ಧಕ ವಶ
ಸಿಸಿಬಿ ದಾಳಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 24, 2021 | 7:59 AM

Share

ದಕ್ಷಿಣ ಕನ್ನಡ: ನಿಗದಿತ ಸಮಯಕ್ಕಿಂತ ಹೆಚ್ಚು ತೆರೆಯಲಾಗಿದ್ದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಮಂಗಳೂರಿನ ಎಂಜಿ ರಸ್ತೆಯಲ್ಲಿರುವ ಓನೆಕ್ಸ್ ಪಬ್​ನಲ್ಲಿ ಜೋರಾಗಿ ಧ್ವನಿವರ್ಧಕ ಬಳಸಿದ್ದು, ಅಕ್ಕಪಕ್ಕದವರಿಗೆ ಕಿರಿಕಿರಿ ಉಂಟುಮಾಡಿದೆ. ಅಲ್ಲದೇ ಪಬ್​ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್​ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಅಬಕಾರಿ ಕಾಯ್ದೆ, ಕೆಪಿ ಕಾಯ್ದೆ, ಎಪಿಡೆಮಿಕ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಿತ್ರದುರ್ಗ: ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್ ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಬ್ಯಾಂಕ್ ಒಳಗೆ ಕೂಡಿ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಸಹಾರಾ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ತಿರುಪತಿ, ಯುವಕ ವಿಕಾಸ್​ ಮೇಲೆ ದರ್ಪ ತೋರಿದ್ದು, ಬ್ಯಾಂಕಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ನಿನ್ನೆ ಸಂಜೆ 5 ರಿಂದ ರಾತ್ರಿ 9ರವರೆಗೆ ಬ್ಯಾಂಕಲ್ಲೇ ವಿಕಾಸ್ ಬಂಧಿಯಾಗಿದ್ದಾನೆ.

ರಾತ್ರಿ ನಗರ ಪೊಲೀಸರು ಸಹಾರಾ ಇಂಡಿಯಾ ಬ್ಯಾಂಕ್​ಗೆ ಬಂದ ಮೇಲೆ ವಿಕಾಸ್​ನನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮ್ಯಾನೇಜರ್ ತಿರುಪತಿ ಹೇಳುವುದೇ ಬೇರೆ. ಬ್ಯಾಂಕಿನ ವಹಿವಾಟು ವಿಚಾರ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟಿನಲ್ಲಿ ಪ್ರಕರಣ ಇತ್ಯರ್ಥ ಬಳಿಕ ಮೆಚುರಿಟಿ ಹಣ ನೀಡುತ್ತೇವೆ. ಈ ಬಗ್ಗೆ ಮಾಹಿತಿ ನೀಡಿದರೂ ವಿಕಾಸ್ ಹಠ ಹಿಡಿದು ಕುಳಿತರು. ಹೀಗಾಗಿ ಬ್ಯಾಂಕ್ ಸುರಕ್ಷತೆ ದೃಷ್ಟಿಯಿಂದ ಬೀಗ ಹಾಕಿದೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore Crime: ಬೆಂಗಳೂರಿನಲ್ಲಿ ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶಕ್ಕೆ

Published On - 7:25 am, Sun, 24 October 21

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು