AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್​​​ ಪಲ್ಟಿ

ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್‌ನಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಧರ್ಮಸ್ಥಳದಿಂದ ಮೂಡಿಗೆರೆಗೆ ಸಾಗುತ್ತಿದ್ದ ಬಸ್‌ನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಪ್ರಪಾತಕ್ಕೆ ಬೀಳುವ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ರಸ್ತೆಯಲ್ಲೇ ಪಲ್ಟಿಯಾದ ಕಾರಣ ಭೀಕರ ದುರಂತ ತಪ್ಪಿದಂತಾಗಿದೆ. ಗಾಯಾಳುಗಳನ್ನು ಸ್ಥಳೀಯ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್​​​ ಪಲ್ಟಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Apr 26, 2026 | 6:31 PM

Share

ಬೆಳ್ತಂಗಡಿ, ಏ.26: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾದ್ದರಿಂದ ಬಸ್ ಪ್ರಪಾತಕ್ಕೆ ಬೀಳುವ ಅಪಾಯವಿತ್ತಾದರೂ, ರಸ್ತೆಯಲ್ಲೇ ಪಲ್ಟಿಯಾಗಿರುವುದರಿಂದ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಬಸ್ಸಿನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಅಪಘಾತದ ರಭಸಕ್ಕೆ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು

ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಘಾಟಿ ಪ್ರದೇಶದ ಕಡಿದಾದ ತಿರುವುಗಳಲ್ಲಿ ಚಾಲಕರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಿಸುವುದೇ ಇಂತಹ ಅಪಘಾತಗಳಿಗೆ ಕಾರಣ ಎಂದು ಶಂಕಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Sun, 26 April 26

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?