AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್​ಪೋರ್ಟ್​ನಲ್ಲಿ ಆತಂಕ ಸೃಷ್ಟಿಸಿದ ಚಾಟಿಂಗ್: ಆರು ತಾಸು ತಡವಾಗಿ ಹಾರಿತು ವಿಮಾನ

ಮಂಗಳೂರು ಏರ್​ಪೋರ್ಟ್​ನಲ್ಲಿ ಚಾಟಿಂಗ್ ಅವಾಂತರ ಪ್ರಕರಣ ಹಿನ್ನೆಲೆ ಇಂದು ಕೂಡ ಬಜ್ಪೆ ಪೊಲೀಸರಿಂದ ಯುವಕ ದೀಪಯನ್ ಮಾಜಿ​(23), ಯುವತಿ ಸಿಮ್ರಾನ್​ ಥಾಮ್​(23) ವಿಚಾರಣೆ ಮಾಡಲಿದ್ದಾರೆ.

ಮಂಗಳೂರು ಏರ್​ಪೋರ್ಟ್​ನಲ್ಲಿ ಆತಂಕ ಸೃಷ್ಟಿಸಿದ ಚಾಟಿಂಗ್: ಆರು ತಾಸು ತಡವಾಗಿ ಹಾರಿತು ವಿಮಾನ
ಮಂಗಳೂರು ಏರ್​ಪೋರ್ಟ್​
TV9 Web
| Edited By: |

Updated on:Aug 15, 2022 | 1:29 PM

Share

ಮಂಗಳೂರು: ಮಂಗಳೂರು ಏರ್​ಪೋರ್ಟ್​ನಲ್ಲಿ ಚಾಟಿಂಗ್ (Chatting) ಅವಾಂತರ ಪ್ರಕರಣ ಹಿನ್ನೆಲೆ ಇಂದು ಕೂಡ ಬಜ್ಪೆ ಪೊಲೀಸರಿಂದ ಯುವಕ ದೀಪಯನ್ ಮಾಜಿ ​(23), ಯುವತಿ ಸಿಮ್ರಾನ್​ ಥಾಮ್​(23) ವಿಚಾರಣೆ ನಡೆಯಲಿದೆ. ಇವರ ಅನುಮಾನಾಸ್ಪದ ಚಾಟಿಂಗ್​ ಬಗ್ಗೆ ಪ್ರಯಾಣಿಕರೊಬ್ಬರು ಪೊಲೀಸರ ಗಮನ ಸೆಳೆದ ಹಿನ್ನೆಲೆಯಲ್ಲಿ ವಿಮಾನ ಹೊರಡುವುದು ಆರು ತಾಸು ತಡವಾಗಿತ್ತು.  ಇಬ್ಬರೂ ಉತ್ತರಪ್ರದೇಶದ ಗಾಜಿಯಾಬಾದ್ ನಿವಾಸಿಗಳಾಗಿದ್ದಾರೆ. 2-3 ದಿನದ ಹಿಂದೆ ಉಡುಪಿ ಮಣಿಪಾಲಕ್ಕೆ ಇಬ್ಬರೂ ಬಂದಿದ್ದರು. ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ನಿನ್ನೆ  ಸ್ಥಗಿತಗೊಳಿಸಲಾಗಿತ್ತು. ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿತ್ತು.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ. ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: Flight delayed by six hours

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 11:22 am, Mon, 15 August 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​