ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ

ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್​ನಿಂದ ಕಾಲರಾ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ ಎದುರಾಗಿದ್ದು, ಆಹಾರ ಸ್ವಲ್ಪ ಕಲುಷಿತವಾದರೂ ಅಪಾಯ ಕಟ್ಟಿಟ್ಟಬುತ್ತಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ! ಆಹಾರ ಗುಣಮಟ್ಟದ ಬಗ್ಗೆ ಎಚ್ಚರವಹಿಸಲು ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಆತಂಕ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 20, 2024 | 5:46 PM

ದಕ್ಷಿಣ ಕನ್ನಡ, ಸೆ.20: ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಓರ್ವ ವ್ಯಕ್ತಿಯಲ್ಲಿ ಕಾಲರಾ(cholera) ಸೋಂಕು ಪತ್ತೆಯಾಗಿದ್ದು, ಉಡುಪಿ(Udupi) ಜಿಲ್ಲೆಯ ಹೊಸ್ಮಾರುವಿನ ಹೋಟೆಲ್​ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೋಂಕು ಪತ್ತೆ ಹಿನ್ನಲೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮಾಲೀಕರ ಜೊತೆ ವಿಶೇಷ ಸಭೆ ನಡೆಸಿದ್ದೇವೆ ಎಂದರು.

ಹೋಟೆಲ್ ಮಾಲೀಕರ ಜೊತೆ ವಿಶೇಷ ಸಭೆ

ಇನ್ನು ಸಭೆಯಲ್ಲಿ ಕಾಲರಾ ಸೋಂಕು ಪ್ರಮುಖವಾಗಿ ಕಲುಷಿತ ಆಹಾರದಿಂದ ಹರಡುವ ಸಾಧ್ಯತೆ ಇದೆ. ಹೀಗಾಗಿ ಕಡ್ಡಾಯವಾಗಿ ಆಹಾರ ಗುಣಮಟ್ಟದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ ನೀಡಿದ್ದೇವೆ‌. ಜೊತೆಗೆ ಕಲುಷಿತ ಆಹಾರ, ಹಳಸಿದ ಆಹಾರವನ್ನ ಗ್ರಾಹಕರಿಗೆ ನೀಡಬಾರದು. ಪ್ರಮುಖವಾಗಿ ತರಕಾರಿ, ಹಣ್ಣು ಹಂಪಲು ಗುಣಮಟ್ಟವನ್ನ ಕಾಪಾಡಬೇಕು. ಗ್ರಾಹಕರಿಗೆ ನೀಡುವ ಪಾತ್ರೆ ಪ್ಲೇಟ್​ಗಳನ್ನ ಬಿಸಿ ನೀರಿನಲ್ಲಿ ತೊಳೆಯಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:ಸಿಎಂ ತವರಲ್ಲಿ ಕಾಲರಾ ಪತ್ತೆ; ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡ ರೋಗ​

ಆಹಾರ ಸ್ವಲ್ಪ ಕಲುಷಿತವಾದರೂ ಕಾಲರಾ ಅಪಾಯ

ಬೇಸಿಗೆ ಸಂದರ್ಭದಲ್ಲಿ ಶುದ್ಧ ನೀರು ಬಳಸಬೇಕು ಹಾಗೂ ಬೇಯಿಸಿದ ಆಹಾರವನ್ನ ಬಳಕೆ ಮಾಡುವುದನ್ನ ಕಡಿಮೆ ಮಾಡಬೇಕು‌‌. ಆಹಾರ ಸ್ವಲ್ಪ ಕಲುಷಿತವಾದರೂ ಕಾಲರಾ ಅಪಾಯವಿದೆ. ಪಂಚಾಯತ್ ರಾಜ್ ವ್ಯಾಪ್ತಿಯ ನೀರಿನ ತೊಟ್ಟಿಗಳ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಕ್ಲೋರಿನೇಷನ್ ಹಾಗೂ ಸೂಪರ್ ಕ್ಲೋರಿನೇಷನ್ ಮಾಡಬೇಕು. ಕಲುಷಿತ ಆಹಾರ ಸೇವನೆ ಮಾಡುವುದರಿಂದ ಕಾಲರಾ ಸೋಂಕು ಹರಡಲಿದ್ದು, ತೀವ್ರ ವಾಂತಿ ಭೇದಿಯಾಗಿ ವ್ಯಕ್ತಿ ಸಾವನ್ನಪ್ಪುವ ಆತಂಕ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us