AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Bommai Speech: ದೇಶ ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕು ಎಂದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದ ಅಭಿವೃದ್ಧಿ ಜೊತೆಗೆ ಭಾರತ ಅಭಿವೃದ್ಧಿ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಮಾತ್ರವಲ್ಲ ಭಾರತವನ್ನೂ ನಡೆಸುತ್ತಿದೆ ಎಂದರು.

CM Bommai Speech: ದೇಶ ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕು ಎಂದ ಸಿಎಂ ಬಸವರಾಜ ಬೊಮ್ಮಾಯಿ
ಮಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
TV9 Web
| Edited By: |

Updated on: Sep 02, 2022 | 3:59 PM

Share

ಮಂಗಳೂರು: ಇಂದು ಕರಾವಳಿ ಅಭಿವೃದ್ಧಿ ಚರಿತ್ರೆಯನನ್ನು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಕೆಲವರು ಕೇಳುತ್ತಾರೆ. ಮೋದಿ ಮಂಗಳೂರಿಗೆ ಪಾದಾರ್ಪಣೆ ಮಾಡಿದ ವೇಳೆ ಸಿಆರ್​ಝೆಡ್ ನೀತಿ ಬದಲಾವಣೆಗೆ ಒಪ್ಪಿಗೆ ಸಿಕ್ಕಿದೆ. ಕಾರವಾರದ ಮಾಜಾಳಿ ಪೋರ್ಟ್ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದೆ. ಮತ್ಸ್ಯ ಸಂಪದ ಯೋಜನೆ ಜಾರಿಯಾಗಿದೆ. ಇವೆಲ್ಲವೂ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಕರ್ನಾಟಕದ ಅಭಿವೃದ್ಧಿ ಜೊತೆಗೆ ಭಾರತ ಅಭಿವೃದ್ಧಿ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಮಾತ್ರವಲ್ಲ ಭಾರತವನ್ನೂ ನಡೆಸುತ್ತಿದೆ ಎಂದರು.

ದೇಶ ಅಭಿವೃದ್ಧಿ ಆಗಬೇಕಾದರೆ ನಮ್ಮ ಬಂದರುಗಳ ಸಾಮರ್ಥ್ಯ ವೃದ್ಧಿಯಾಗಬೇಕು ಎಂದು ಮೋದಿ ಅವರು ಕನಸು ಕಂಡಿದ್ದರು. 8 ವರ್ಷಗಳ ಯೋಜನೆಗೆ ಈಗ ಪ್ರತಿಫಲ ಸಿಗುತ್ತಿದೆ. ಇವತ್ತು 3,800 ಕೋಟಿ ರೂಪಾಯಿ ಮೊತ್ತದಲ್ಲಿ ಮಂಗಳೂರು ಬಂದರು ದೊಡ್ಡ ಅಭಿವೃದ್ಧಿಯಾಗುತ್ತಿದೆ. ನಾಲ್ಕು ಪಟ್ಟು ಅದರ ಸಾಮರ್ಥ್ಯ ವೃದ್ಧಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕರಾವಳಿ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿ ಆಗುತ್ತಿದೆ ಎಂದು ಅವರು ವಿವರಿಸಿದರು.

ಕರಾವಳಿ ಉದ್ಯಮಿಗಳಿಗೆ ಸಿಆರ್​ಜೆಡ್ ನಿಯಮಗಳಲ್ಲಿ ಗೋವಾ ಮತ್ತು ಕೇರಳಗಳಿಗೆ ಇರುವ ಅನುಕೂಲ ನಮಗೆ ಇರಲಿಲ್ಲ. ಈಗ ಸಿಆರ್​ಜೆಡ್​ ಕರ್ನಾಟಕದ ಮಾಸ್ಟರ್​ಪ್ಲಾನ್​ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ನಮ್ಮ ಹಲವು ವರ್ಷಗಳ ಸಮಸ್ಯೆ ಪರಿಹಾರವಾದಂತೆ ಆಗಿದೆ ಎಂದು ಶ್ಲಾಘಿಸಿದರು.

ಕಾರವಾರದ ಮಜಾಲಿ ಬಂದರನ್ನು 350 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಧಾನಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮೊದಲ ಬಾರಿಗೆ 100 ಹೈಸ್ಪೀಡ್ ದೋಣಿಗಳನ್ನು ಶೇ 40ರ ಸಬ್ಸಿಡಿಯಲ್ಲಿ ಒದಗಿಸಿದೆ. ಇವು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಸಾಮರ್ಥ್ಯ ಹೊಂದಿವೆ. ಇವತ್ತು ನಾವು ಹೊನ್ನಾವರ ಮತ್ತು ಹೂವಿನಕಾರ ಬಂದರುಗಳ ಅಭಿವೃದ್ಧಿ ಜೊತೆಗೆ ನವ ಮಂಗಳೂರು ಹಾಗೂ ಕಾರವಾರ ಬಂದರುಗಳ ವಿಸ್ತರಣೆಯ ಯೋಜನೆ ಆರಂಭಿಸಿದ್ದೇವೆ ಎಂದರು.

ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಸೌಕರ್ಯ, ಮೀನುಗಾರಿಕೆ ಸಂಸ್ಥೆ, ಮೀನುಗಾರಿಕೆಯ ವಸತಿ ಸೌಕರ್ಯಕ್ಕೆ ಕ್ರಮ ಕೈಗೊಂಡಿದ್ದೇವೆ. ದೇಶವನ್ನು ಸ್ವಾವಲಂಬಿಯಾಗಿಸಲು ಬಂದರುಗಳಿಗೆ ಶಕ್ತಿ ತುಂಬಬೇಕಿದೆ. ಅದಕ್ಕಾಗಿ ಮೋದಿ ಮಂಗಳೂರಿಗೆ ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾಷಣ ಮುಗಿಸಿದ ಬಳಿಕ ಸಿಎಂಗೆ ಮೋದಿ ಅವರು ಹಸ್ತಲಾಘವ ನೀಡಿದರು. ಕಾರ್ಯಕ್ರಮದಲ್ಲಿ ಮೂವರು ಮೀನುಗಾರರಿಗೆ ಸಾಂಕೇತಿಕವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲಾಯಿತು.

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ