ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ, ಉಡುಪಿ ತಲುಪುವ ಮುನ್ನ ​ಮೌನ ಮುರಿದ ಸಿದ್ದರಾಮಯ್ಯ

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ಮುರಿದಿದ್ದಾರೆ.

ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ, ಉಡುಪಿ ತಲುಪುವ ಮುನ್ನ ​ಮೌನ ಮುರಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
Edited By:

Updated on: Aug 01, 2023 | 12:26 PM

ಮಂಗಳೂರು, (ಆಗಸ್ಟ್ 01): ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿರುವ ಉಡುಪಿ(Udupi) ಖಾಸಗಿ ಕಾಲೇಜಿನ ಶೌಚಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಮೌನ ಮುರಿದಿದ್ದಾರೆ. ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಇಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಬಂದಿಳಿದರು. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ನೇತ್ವದಲ್ಲಿ ತನಿಖೆ ನಡೆಯುತ್ತಿದ್ದು, ಅದು ಮೊದಲು ನಡೆಯಲಿ. ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಬರಲಿ. ಆಮೇಲೆ ಈ ಬಗ್ಗೆ ಮಾತನಾಡುತ್ತೇನೆ. ಕಾಲೇಜ್‌ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಹೋಂ ಮಿನಿಸ್ಟರ್ ಹೇಳಿರಬಹುದು. ಎಫ್ಐಆರ್ ಆಗಿ ತನಿಖೆ ನಡೆಯುತ್ತಿದೆ. ಡಿವೈಎಸ್ಪಿ ಲೆವೆಲ್ ತನಿಖೆ ಆಗುತ್ತಿರುವ ಎಸ್ ಐಟಿ ತನಿಖೆ ಪ್ರಶ್ನೆ ಉದ್ಭವಿಸಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಡುಪಿ ಕಾಲೇಜಿಗೆ ಖುಷ್ಬೂ ಜತೆ ಬಂದ ವಕೀಲೆ ಬಗ್ಗೆ ಬಿಜೆಪಿ ಆಕ್ಷೇಪ, ಮಹಿಳಾ ಕಾಂಗ್ರೆಸ್ ತಿರುಗೇಟು

ಕರಾವಳಿಗೆ ಆಗಲೇ ಏನೇನು ಕೊಡಬಹುದು ಎಂದು ಹೇಳಿದ್ದೇವೆ. ಜುಲೈ ತಿಂಗಳ ಮಳೆ ಹಾನಿ ಬಗ್ಗೆ ಪರಿಶೀಲನೆಗೆ ಬಂದಿದ್ದೇನೆ. ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ. ಕಾನೂನು ಕೈಗೆತ್ತಿಕೊಳ್ಳಲು ಇಲ್ಲಿ ಯಾರಿಗೂ ಅವಕಾಶ ಇಲ್ಲ. ಪೊಲೀಸರಿಗೆ ಇದಕ್ಕೆ ಅವಕಾಶ ಕೊಡಬೇಡಿ ಎಂದು ಎಚ್ಚರಿಕೆ ನೀಡಿದರು.

ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು. ಅದು ಕೋರ್ಟ್​ನಲ್ಲಿ ಇತ್ತು. ಈಗ ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ. ಕಾನೂನು ಪ್ರಕಾರ ಏನಾಗಬೇಕು ಅಂತ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ. ನಾನು ಲಾಯರ್ ಆಗಿ ಹೇಳುವುದಾದರೆ ಇದರ ಬಗ್ಗೆ ಹೈಕೋರ್ಟ್ ಗೆ ಅಪೀಲ್ ಹೋಗಬೇಕು. ನಾನು ಸಿಬಿಐ ಕೋರ್ಟ್ ಜಡ್ಜ್ ಮೆಂಟ್ ನೋಡಿಲ್ಲ.ಅವರ ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ. ಅದರ ಜಡ್ಜ್ ಮೆಂಟ್ ಓದಿ ಅಪೀಲ್​ಗೆ ಅವಕಾಶ ಇದ್ಯಾ ಅಂತ ನೋಡುತ್ತೇನೆ ಎಂದು ತಿಳಿಸಿದರು.

ಸಾಮಾಜಿಕ ತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿಗೆ ಕ್ರಮ. ಫ್ಯಾಮಿಲಿ ಬಗ್ಗೆ ಹೇಳುವುದು ಟೀಕೆನಾ? ಏನು ಬೇಕಾದರೂ ಹೇಳಬಹುದಾ? ನಿಮ್ಮ ಫ್ಯಾಮಿಲಿ ಬಗ್ಗೆ ಯಾರಾದ್ರೂ ಏನು ಬೇಕಾದರೂ ಹೇಳಬಹುದಾ ಎಂದು ಪ್ರಶ್ನಿಸಿದ ಸಿಎಂ, ಟೀಕೆ ಬೇರೆ, ಸುಳ್ಳು ಸುದ್ದಿ ಹಬ್ಬಿಸುವುದ ಬೇರೆ. ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಕೂಡ ಬೇರೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us