AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಗೆ ತೆರಳುವ ಮಹಿಳೆಯೊಬ್ಬರು ರಾಷ್ಟ್ರಧ್ವಜಕ್ಕೆ ವಂದಿಸುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಸುಳ್ಯದ ಗಾಂಧಿ ವಿಚಾರ ವೇದಿಕೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೆ ಅದೇ ದಾರಿಯಾಗಿ ಕೂಲಿಗೆ ಹೊರಟಿದ್ದ ಮಹಿಳೆ ಧ್ವಜವನ್ನು ಕಂಡು, ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ.

ಕೂಲಿಗೆ ತೆರಳುವ ಮಹಿಳೆಯೊಬ್ಬರು ರಾಷ್ಟ್ರಧ್ವಜಕ್ಕೆ ವಂದಿಸುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಸಾಮಾನ್ಯ ಮಹಿಳೆಯ ದೇಶಭಕ್ತಿ
TV9 Web
| Edited By: ಆಯೇಷಾ ಬಾನು|

Updated on: Aug 16, 2021 | 8:00 AM

Share

ಮಂಗಳೂರು: ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದ ವಿವಿಧೆಡೆ ಸಂಭ್ರಮದಿಂದ ಆಚರಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ವಿವಿಧ ನಾಯಕರು ಹಾಗೂ ಜನಸಾಮಾನ್ಯರು ಕೂಡ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗಿದರು. ದೇಶ ಹಾಗೂ ಕರ್ನಾಟಕದ ವಿವಿಧೆಡೆ ವಿನೂತನ ಶೈಲಿಯ ಸ್ವಾತಂತ್ರ್ಯ ದಿನೋತ್ಸವ ಗಮನ ಸೆಳೆಯಿತು. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲಿ ಅತಿಸಾಮಾನ್ಯ ಮಹಿಳೆಯೊಬ್ಬರು ಭಾರತದ ಬಾವುಟಕ್ಕೆ ಚಪ್ಪಲಿ ಕಳಚಿಟ್ಟು ಸೆಲ್ಯೂಟ್ ಹೊಡೆದಿರುವ ಫೋಟೊ ವೈರಲ್ ಆಗಿದೆ.

ಸುಳ್ಯದ ಗಾಂಧಿ ವಿಚಾರ ವೇದಿಕೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೆ ಅದೇ ದಾರಿಯಾಗಿ ಕೂಲಿಗೆ ಹೊರಟಿದ್ದ ಮಹಿಳೆ ಧ್ವಜವನ್ನು ಕಂಡು, ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ. ಚಪ್ಪಲಿ ಕಳಚಿಟ್ಟು, ಧ್ವಜಕ್ಕೆ ಸೆಲ್ಯೂಟ್ ಮಾಡಿದ್ದಾರೆ. ಸ್ಥಳದಲ್ಲಿ ಇದ್ದವರು ಈ ಕ್ಷಣವನ್ನು ಸೆರೆ ಹಿಡಿದಿದ್ದಾರೆ. ಈಗ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನರು ಸಾಮಾನ್ಯ ಮಹಿಳೆಯೊಬ್ಬರ ದೇಶಪ್ರೇಮದ ಫೋಟೊವನ್ನು ಮೆಚ್ಚಿ, ಹಂಚಿಕೊಂಡಿದ್ದಾರೆ.

ಈ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದ ನಂತರ ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿ ತನ್ನ ಪಾಡಿಗೆ ಕೆಲಸಕ್ಕೆ ಹೊರಟು ಹೋದರಂತೆ. ಇದು ಭಾರತ. ಇದು ಸಂಭ್ರಮ. ಇದು ಶ್ರದ್ಧೆ. ಇದು ಭಕ್ತಿ ಎಂದು ಸಿ.ಟಿ. ರವಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು