AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore: ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಆಕ್ಷೇಪ

ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್‌ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ (ಪಂಪ್‌ವೆಲ್ ವೃತ್ತ) ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಗೆ ಅನುಮೋದನೆ ನೀಡಿತ್ತು.

Mangalore: ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಆಕ್ಷೇಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 01, 2022 | 4:04 PM

Share

ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ (Chhatrapati Shivaji statue) ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್‌ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ (ಪಂಪ್‌ವೆಲ್ ವೃತ್ತ) ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಯನ್ನು ಅಕ್ಟೋಬರ್ 29 ರಂದು ಎಂಸಿಸಿ ತನ್ನ ಸಭೆಯಲ್ಲಿ ಅನುಮೋದಿಸಿತು.

ಬುಧವಾರ ಕೌನ್ಸಿಲ್ ಸಭೆ ಸೇರಿದಾಗ, ವಿರೋಧ ಪಕ್ಷದ ನಾಯಕ ನವೀನ್ ಡಿಸೋಜಾ ಅವರು ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಲುವನ್ನು ಎತ್ತಿ ಹಿಡಿದ ಕ್ರಮವನ್ನು ವಿರೋಧಿಸಿದರು. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಶಾಂತಿ ಕದಡಲು ಎಂಇಎಸ್ ಯತ್ನಿಸುತ್ತಿರುವ ಸಂದರ್ಭದಲ್ಲಿ ನಗರದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವುದು ಸರಿಯಲ್ಲ ಎಂದರು. ಶಿವಾಜಿ ಪ್ರತಿಮೆಯ ಬದಲು ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರ ಪ್ರತಿಮೆ ಸ್ಥಾಪಿಸಬಹುದು ಎಂದು ಸಲಹೆ ನೀಡಿದರು.

ಇದನ್ನು ಓದಿ:ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಮೈಸೂರಿನಲ್ಲಿ ತರಬೇತಿ ಪಡೆದಿದ್ದ ಶಾರಿಕ್​ನಿಂದ ಶಿವಮೊಗ್ಗದ ತುಂಗಾ ತೀರದಲ್ಲಿ ರಿಹರ್ಸಲ್

ಕರಾವಳಿ ಭಾಗದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾಧಕರೊಬ್ಬರ ಪ್ರತಿಮೆಯನ್ನು ಪರಿಗಣಿಸಬೇಕು ಎಂದು ಕಾಂಗ್ರೆಸ್ ಸದಸ್ಯ ಶಶಿಧರ ಹೆಗಡೆ ಹೇಳಿದರು. ಬಿಜೆಪಿ ಸದಸ್ಯರು ಕಾಂಗ್ರೆಸ್ ಈ ಮಾತಿಗೆ ಪ್ರತಿಯಾಗಿ, ಹಿಂದೂ ನಾಯಕರನ್ನು ವಿರೋಧಿಸುವುದನ್ನು ಕಾಂಗ್ರೆಸ್ ಅಭ್ಯಾಸ ಮಾಡಿಕೊಂಡಿದೆ. ಶಿವಾಜಿ ಹೆಸರನ್ನು ಮಹಾರಾಷ್ಟ್ರಕ್ಕೆ ಸೀಮಿತಗೊಳಿಸಬಾರದು ಎಂದು ಪಕ್ಷದ ಕಾರ್ಪೊರೇಟರ್‌ಗಳು ಹೇಳಿದರು. ಕಾರ್ಪೊರೇಟರ್‌ಗಳ ನಡುವೆ ಮಾತಿನ ಚಕಮಕಿ ಮುಂದುವರಿದಾಗ ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಅವರು ಪ್ರಸ್ತಾವನೆಗೆ ಈಗಾಗಲೇ ಕಳೆದ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಪ್ರತಿಪಕ್ಷಗಳ ಆಕ್ಷೇಪಣೆಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Thu, 1 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು