AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: ತಂದೆ ಅಂತ್ಯಸಂಸ್ಕಾರದ ವೇಳೆ ಮಗನೂ ಸಾವು; ಮತ್ತೊಂದೆಡೆ ತಂದೆ-ತಾಯಿ ಕಳೆದುಕೊಂಡ 8 ಮಕ್ಕಳು

ಭುಜಂಗ ಶೆಟ್ಟಿ ಪುತ್ರ ಶೈಲೇಶ್ ಶೆಟ್ಟಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲುಪುವ ವೇಳೆಗಾಗಲೇ ಕೊನೆಯುಸಿರೆಳೆದಿದ್ದಾರೆ. ಶೈಲೇಶ್ ಶೆಟ್ಟಿ, ಆಸ್ಟ್ರೇಲಿಯಾದಲ್ಲಿ ಉದ್ಯೋಗದಲ್ಲಿದ್ದು, ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.

ಕೊರೊನಾ ಸಂಕಷ್ಟ: ತಂದೆ ಅಂತ್ಯಸಂಸ್ಕಾರದ ವೇಳೆ ಮಗನೂ ಸಾವು; ಮತ್ತೊಂದೆಡೆ ತಂದೆ-ತಾಯಿ ಕಳೆದುಕೊಂಡ 8 ಮಕ್ಕಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 02, 2021 | 6:07 PM

Share

ಮಂಗಳೂರು: ತಂದೆ ಅಂತ್ಯಸಂಸ್ಕಾರದ ವೇಳೆ ಕುಸಿದು ಬಿದ್ದು ಮಗನೂ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳದಲ್ಲಿ ನಡೆದಿದೆ. ತಂದೆ ಭುಜಂಗ ಶೆಟ್ಟಿ ನಿನ್ನೆ ರಾತ್ರಿ ಕೊರೊನಾದಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ವೇಳೆ ಇಂದು (ಜೂನ್ 2) ಹೃದಯಾಘಾತದಿಂದ ಮಗ ಕೂಡ ಮೃತಪಟ್ಟಿದ್ದಾರೆ. ಭುಜಂಗ ಶೆಟ್ಟಿಯವರ ಕಿರಿಯ ಪುತ್ರ ಶೈಲೇಶ್ ಶೆಟ್ಟಿ(44) ಸಾವನ್ನಪ್ಪಿದ್ದಾರೆ.

ಭುಜಂಗ ಶೆಟ್ಟಿ ಪುತ್ರ ಶೈಲೇಶ್ ಶೆಟ್ಟಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲುಪುವ ವೇಳೆಗಾಗಲೇ ಕೊನೆಯುಸಿರೆಳೆದಿದ್ದಾರೆ. ಶೈಲೇಶ್ ಶೆಟ್ಟಿ, ಆಸ್ಟ್ರೇಲಿಯಾದಲ್ಲಿ ಉದ್ಯೋಗದಲ್ಲಿದ್ದು, ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.

ಮೃತ ಭುಜಂಗ ಶೆಟ್ಟಿಯವರ ಮನೆಯಲ್ಲಿ ಅವರ ಪತ್ನಿಯ ಹೊರತಾಗಿ ಇತರ ಎಲ್ಲರಿಗೂ ಕೊರೊನಾ ಪಾಸಿಟಿವ್ ಆಗಿದೆ. ಆದರೆ, ಶೈಲೇಶ್‌ ಶೆಟ್ಟಿ ಹಾರಾಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದುದರಿಂದ, ಅವರಿಗೆ ಕೊರೊನಾ ಸೋಂಕು ಬಾಧಿಸಿರಲಿಲ್ಲ. ಹೀಗಿದ್ದರೂ ದುರ್ವಿಧಿ ಎಂಬಂತೆ ಈ ಘಟನೆ ಸಂಭವಿಸಿದೆ.

ಬಾಗಲಕೋಟೆ: ಎಂಟು ಜನ ಮಕ್ಕಳನ್ನು ಅಗಲಿದ ದಂಪತಿ ಕೊರೊನಾ ಸೋಂಕಿನಿಂದ ಪತಿ- ಪತ್ನಿ ಇಬ್ಬರೂ ಮೃತಪಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಾಮಪ್ಪ ಹೂಗಾರ (54) ಹಾಗೂ ಪತ್ನಿ ದುಂಡಮ್ಮ ಹೂಗಾರ (47) ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಮೇ 22ರಂದು ಕೊರೊನಾದಿಂದ ರಾಮಪ್ಪ ಹೂಗಾರ ಮೃತರಾಗಿದ್ದರು. ಆ ಬಳಿಕ, ದುಂಡವ್ವ ಮೇ 29ರಂದು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮೊದಲು ರಾಮಪ್ಪ ಹೂಗಾರಗೆ ಸೊಂಕು ಕಾಣಿಸಿಕೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಆ ಬಳಿಕ, ಪತಿಯ ಆರೈಕೆ ಮಾಡುತಿದ್ದ ಪತ್ನಿಗೂ ಸೊಂಕು ತಗುಲಿತ್ತು. ವಾರದ ಬಳಿಕ ಪತ್ನಿಯೂ ಮೃತಪಟ್ಟಿದ್ದಾರೆ. ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಸಾವು ಸಂಭವಿಸಿದೆ. ತಂದೆ ತಾಯಿಗಾಗಿ ಮಕ್ಕಳು ಎಂಟು ಲಕ್ಷ ಹಣ ಖರ್ಚು ಮಾಡಿದರೂ ಬದುಕಿಲ್ಲ ಎಂದು ಬೇಸರ ವ್ಯಕ್ತವಾಗಿದೆ.

ಮೃತ ದಂಪತಿಗೆ ಎಂಟು ಮಕ್ಕಳಿದ್ದಾರೆ. ಎಂಟು ಜನ ಮಕ್ಕಳನ್ನು ದಂಪತಿ ಅಗಲಿ ಹೋಗಿದ್ದಾರೆ. ಏಳು ಜನ ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಆರು ಜನ ಹೆಣ್ಣು ಮಕ್ಕಳ‌ ಮದುವೆಯಾಗಿದೆ. 16 ವರ್ಷದ ಪುತ್ರಿ, ಹಾಗೂ 17 ವರ್ಷದ ಮಗ ಇದ್ದಾರೆ‌‌‌.

ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ; ಸರ್ಕಾರದ ಪರವಾಗಿ ಸಂಕಲ್ಪಕ್ಕೆ ಕುಳಿತ ಆರ್ ಅಶೋಕ್

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಕೊರೊನಾ ಲಸಿಕೆ ಪೂರೈಸಲಿ; ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ