AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರಿದ್ ಕುರ್ಬಾನಿ ಹೆಸರಿನಲ್ಲಿ ಗೋವುಗಳ ಮಾರಣ ಹೋಮ; ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಬಜರಂಗದಳ ಮನವಿ

ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ರಾಜ್ಯ ಸರ್ಕಾರ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗ ದಳ ಮನವಿ ಮಾಡಿದೆ.

ಬಕ್ರಿದ್ ಕುರ್ಬಾನಿ ಹೆಸರಿನಲ್ಲಿ ಗೋವುಗಳ ಮಾರಣ ಹೋಮ; ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಬಜರಂಗದಳ ಮನವಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 26, 2023 | 3:17 PM

Share

ಮಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ಬಕ್ರಿದ್​ಗೆ(Bakrid) ಕೆಲವೇ ದಿನಗಳು ಬಾಕಿ ಇವೆ. ಈ ವರ್ಷ ಜೂನ್ 29ರಂದು ಬಕ್ರೀದ್ ಆಚರಿಸಲಾಗುತ್ತಿದ್ದು ಮುಸ್ಲಿಮರು ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಕುರಿಗಳ ಮಾರಾಟ ಹೆಚ್ಚಾಗಿದೆ. ಇನ್ನು ಬಕ್ರಿದ್ ಹಿನ್ನೆಲೆ ಕುರ್ಬಾನಿ ಹೆಸರಿನಲ್ಲಿ ಸಾವಿರಾರು ಗೋವುಗಳ ಮಾರಣ ಹೋಮ ಆಗುವ ಸಾಧ್ಯತೆ ಇದೆ ಎಂದು ಬಜರಂಗದಳ(Bajrang Dal) ಆತಂಕ ವ್ಯಕ್ತಪಡಿಸಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ಗೋವಂಶ ಹತ್ಯೆಯ ಬಗ್ಗೆ ಆತಂಕ ಹೊರ ಹಾಕಿದ್ದಾರೆ. ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ರಾಜ್ಯ ಸರ್ಕಾರ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಕ್ರಮ ಗೋಸಾಗಾಣಿಕೆ, ಗೋವುಗಳ ಬಲಿಯನ್ನು ತಡೆಯಬೇಕು. ಇಂದಿನಿಂದ ಜೂನ್ 30 ರವರೆಗೆ ಚೆಕ್ ಪೋಸ್ಟ್ ತೆರೆಯಬೇಕು. ಗೋಸಾಗಾಟ ತಡೆಯಲು ವಿಶೇಷ ಪೊಲೀಸ್ ತಂಡ ರಚಿಸಬೇಕು ಎಂದು ಬಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ 2 ಕೋಮಿನ ಯುವಕರ ನಡುವೆ ಗಲಾಟೆ ಆಗಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್​ಪಿ

ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿ ಕುದ್ರುಬೆಟ್ಟುವಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಮೂರು ಹಸುಗಳನ್ನು ವಶಕ್ಕೆ ಪಡೆಯಲಾಗಿದೆ. ಕರಿಕಲ್ಕಟ್ಟೆಯ ಚಂದ್ರ ಶೆಟ್ಟಿ (55), ಗುಡ್ಡೆಯಂಗಡಿ ನಿವಾಸಿ ಅಣ್ಣಪ್ಪ (65) ಬಂಧಿತ ಅರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣೆ ಪಿಎಸ್​ಐ ನಾಸೀರ್ ಹುಸೇನ್ ಖಚಿತ ಮಾಹಿತಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಕುಂದಾಪುರ ಕಡೆಗೆ ಸಾಗುತ್ತಿದ್ದರು ಎಂಬ ಮಾಹಿತಿ ಸಿಕ್ಕಿದ್ದು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ