ಸಿಕ್ಸರ್‌ ಹೊಡೆದಿದ್ದಕ್ಕೆ ಟಕ್ಕರ್​​! ಕ್ರಿಕೆಟ್ ಆಟಗಾರರನ್ನು ಅಟ್ಟಾಡಿಸಿಕೊಂಡು ಹೋದ ಜೇನುನೊಣಗಳ ಹಿಂಡು

Bee attack: ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ.

ಮಂಗಳೂರು, ಫೆಬ್ರವರಿ 5: ಕ್ರಿಕೆಟ್ ಆಟಗಾರರ ಮೇಲೆ ಜೇನುನೊಣಗಳ ಹಿಂಡು ದಾಳಿ (Bee attack) ಮಾಡಿದೆ. ದಕ್ಷಿಣ ಕನ್ನಡ ಜಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೃದಾನದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದ ನಡುವೆ ಆಟಗಾರನೊಬ್ಬ ಸಿಕ್ಸರ್‌ ಹೊಡೆದುಬಿಟ್ಟ. ಬಾಲು ಸೀದಾ ಹೋಗಿ ಮೈದಾನದಿಂದ ಹೊರಗೆ ತೆಂಗಿನ ಮರಕ್ಕೆ ಬಿತ್ತು. ಆದರೆ ಆ ತಂಗಿನ ಮರದಲ್ಲಿ ಜೇನುಗೂಡು ಕಟ್ಟಿತ್ತು. ಸೀದಾ ಆ ಜೇನುಗೂಡಿಗೆ ಚೆಂಡು ಬಡಿದಿದೆ.

ಅಷ್ಟೇ… ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us