AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ

ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ
ಪಡಿತರ ಅಕ್ಕಿ ಗೌಡೌನ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Aug 18, 2023 | 1:30 PM

Share

ಮಂಗಳೂರು: ರಾಜ್ಯದಲ್ಲಿ ಪಡಿತರ ಅಕ್ಕಿ (Rice) ವಿತರಣೆ ವಿಚಾರವಾಗಿ ಯುದ್ಧವೇ ನಡೆದಿದೆ. ಅನ್ನಭಾಗ್ಯ ಯೋಜನೆ (Anna Bhagya) ಅಡಿ ರಾಜ್ಯ ಸರ್ಕಾರ 10 ಕೇಜಿ ಅಕ್ಕಿ ನೀಡಲು ಘೋಷಿಸಿತ್ತು. ಈಗ ನೀಡುತ್ತಿರುವ ಐದು ಕೇಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಐದು ಕೇಜಿ ಅಕ್ಕಿ ನೀಡಲು ನಿರ್ಧರಿಸಿತ್ತು. ಆದರೆ ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಕ್ಕಿಯ ಬದಲಾಗಿದೆ ಹಣ ನೀಡುತ್ತಿದೆ. ಒಂದು ಕಡೆ ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಬರೊಬ್ಬರಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದ್ದು, ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಗೋಲ್ಮಾಲ್ ಪತ್ತೆಯಾಗಿದೆ. ಪಡಿತರ ಅಕ್ಕಿ ಅವ್ಯವಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸಾವರ್ಕರ್​​ಗೆ ಜೈಕಾರ; ಶಿಕ್ಷಕಿ ಕ್ಷಮೆ ಕೇಳುವಂತೆ ಪೋಷಕರ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಗೋದಾಮಿನ ನಿರ್ವಾಹಕ ವಿಜಯ್ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ