AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ

ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ
ಪಡಿತರ ಅಕ್ಕಿ ಗೌಡೌನ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on: Aug 18, 2023 | 1:30 PM

ಮಂಗಳೂರು: ರಾಜ್ಯದಲ್ಲಿ ಪಡಿತರ ಅಕ್ಕಿ (Rice) ವಿತರಣೆ ವಿಚಾರವಾಗಿ ಯುದ್ಧವೇ ನಡೆದಿದೆ. ಅನ್ನಭಾಗ್ಯ ಯೋಜನೆ (Anna Bhagya) ಅಡಿ ರಾಜ್ಯ ಸರ್ಕಾರ 10 ಕೇಜಿ ಅಕ್ಕಿ ನೀಡಲು ಘೋಷಿಸಿತ್ತು. ಈಗ ನೀಡುತ್ತಿರುವ ಐದು ಕೇಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಐದು ಕೇಜಿ ಅಕ್ಕಿ ನೀಡಲು ನಿರ್ಧರಿಸಿತ್ತು. ಆದರೆ ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಕ್ಕಿಯ ಬದಲಾಗಿದೆ ಹಣ ನೀಡುತ್ತಿದೆ. ಒಂದು ಕಡೆ ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಬರೊಬ್ಬರಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದ್ದು, ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಗೋಲ್ಮಾಲ್ ಪತ್ತೆಯಾಗಿದೆ. ಪಡಿತರ ಅಕ್ಕಿ ಅವ್ಯವಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸಾವರ್ಕರ್​​ಗೆ ಜೈಕಾರ; ಶಿಕ್ಷಕಿ ಕ್ಷಮೆ ಕೇಳುವಂತೆ ಪೋಷಕರ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಗೋದಾಮಿನ ನಿರ್ವಾಹಕ ವಿಜಯ್ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್