AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ, ಸೈಬರ್ ತಜ್ಞರಿಂದ ಎಚ್ಚರಿಕೆ ಸಂದೇಶ

ಪಾಕಿಸ್ತಾನದ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯ ನಂತರ, ಪಾಕಿಸ್ತಾನದಿಂದ ಸೈಬರ್ ದಾಳಿಯ ಆತಂಕ ಹೆಚ್ಚಾಗಿದೆ. ಸೈಬರ್ ತಜ್ಞ ಡಾ. ಅನಂತ ಪ್ರಭು ಅವರು ಸರ್ಕಾರಿ ಮತ್ತು ಖಾಸಗಿ ವೆಬ್‌ಸೈಟ್‌ಗಳ ಮೇಲೆ ದಾಳಿ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ಎಚ್ಚರಿಕೆ ವಹಿಸುವಂತೆ ಮತ್ತು ಸೆಕ್ಯೂರಿಟಿ ಆಡಿಟ್ ಮಾಡಿಸುವಂತೆ ಅವರು ಸಲಹೆ ನೀಡಿದ್ದಾರೆ.

ಮಂಗಳೂರು: ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ, ಸೈಬರ್ ತಜ್ಞರಿಂದ ಎಚ್ಚರಿಕೆ ಸಂದೇಶ
ಸೈಬರ್ ತಜ್ಞ ಡಾ. ಅನಂತ ಪ್ರಭು (ಎಡ ಚಿತ್ರ) ಹಾಗೂ ಸಾಂದರ್ಭಿಕ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 08, 2025 | 12:41 PM

Share

ಮಂಗಳೂರು, ಮೇ 8: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ (Indian Arm Air Strike) ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ (Cyber War) ನಡೆಸುವ ಆತಂಕ ಎದುರಾಗಿದೆ. ಈ ವಿಚಾರವಾಗಿ ಸೈಬರ್ ತಜ್ಞರು (Cyber Experts) ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್​ಗಳ ಕಣ್ಣಿದ್ದು, ಅನೇಕ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡಲು ಯತ್ನಿಸುವ ಸಾಧ್ಯತೆ ಇದೆ. ಸರ್ಕಾರಿ ವೆಬ್​ಸೈಟ್​ಗಳನ್ನೇ ಪಾಕಿಸ್ತಾನಿಯರು ಗುರಿ ಮಾಡುವ ಸಾಧ್ಯತೆ ಇದೆ ಎಂದು ಮಂಗಳೂರಿನಲ್ಲಿ ಸೈಬರ್ ತಜ್ಞ ಡಾ. ಅನಂತ ಪ್ರಭು ಹೇಳಿದ್ದಾರೆ.

‘ಟಿವಿ9’ ಜೊತೆ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬರೂ ಪಾಕಿಸ್ತಾನೀಯರಿಂದ ಎದುರಾಗಬಹುದಾದ ಸಂಭಾವ್ಯ ಸೈಬರ್ ವಾರ್ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆ ರೀತಿಯಲ್ಲಿಯೇ ಸೈಬರ್ ವಿಂಗ್ ಕೂಡ ಇದೆ. ಕೃತಕ ಬುದ್ಧಿಮತ್ತೆ ಬಂದಮೇಲೆ ವೈರಸ್ ಸಿದ್ಧಪಡಿಸಿ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡುವ ಸುಲಭವಾಗಿದೆ. ಡಾರ್ಕ್ ವೆಬ್ ಮೂಲಕ ಭಾರತದ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡುವ ಆತಂಕವಿದೆ ಎಂದು ಅವರು ಹೇಳಿದ್ದಾರೆ.

ಬೇರೆ ದೇಶಗಳ ಸರ್ವರ್ ಉಳ್ಳ ವೆಬ್​ಸೈಟ್ ಬಳಸುವಾಗ ಎಚ್ಚರ

ಪಾಕಿಸ್ತಾನಿ ಹ್ಯಾಕರ್‌ಗಳು ಬೇರೆ ರಾಷ್ಟ್ರಗಳ ಸಹಾಯ ಬಳಸಿ ಕೃತ್ಯ ಎಸಗುವ ಸಾಧ್ಯತೆ ಇದೆ. ಹೀಗಾಗಿ ನಾವು ವೆಬ್​ಸೈಟ್​ ಬಳಸುವ ವೇಳೆ ಯಾವ ದೇಶದ ಸರ್ವರ್ ಇದೆ ಎಂಬುದನ್ನು ಕೂಡ ಗಮನಿಸಿಕೊಳ್ಳಬೇಕು. ಶತ್ರು ರಾಷ್ಟ್ರದ ಸರ್ವರ ಇದ್ದರೆ ಅದರ ಮೂಲಕ ದಾಳಿ ಮಾಡುವ ಸಾಧ್ಯತೆ ಹೆಚ್ಚು ಎಂದು ಅವರು ಸುಳಿವು ನೀಡಿದ್ದಾರೆ.

ಇದನ್ನೂ ಓದಿ
Image
ಆಪರೇಷನ್ ಸಿಂದೂರ್​​​ಗೆ ಬೆಂಗಳೂರು ನಂಟು?
Image
ಟರ್ಕಿ ಜೊತೆ ಸ್ನೇಹ ಯಾಕೆ? ಸರ್ಕಾರವನ್ನು ಟೀಕಿಸಿದ ತಜ್ಞರು
Image
80 ಭಾರತೀಯ ವಿಮಾನಗಳಿಂದ ಸ್ಟ್ರೈಕ್; ಟ್ರೋಲ್ ಆದ ಪಾಕ್ ಪ್ರಧಾನಿ
Image
ಇಂಟರ್ನೆಟ್​​​ನಲ್ಲಿ ಪಾಕ್ ಜನಸಾಮಾನ್ಯರು ಹೆಚ್ಚು ಹುಡುಕಿದ್ದು ಏನನ್ನು?

ಆದಷ್ಟು ವೆಬ್​ಸೈಟ್​ಗಳ ಸೆಕ್ಯೂರಿಟಿ ಆಡಿಟ್ ಮಾಡಬೇಕು ಎಂದು ಸಲಹೆ ನೀಡಿರುವ ಅವರು, ಸೇನಾಪಡೆಗಳ ಸಿಬ್ಬಂದಿ ಕೂಡ ಈ ಸಂದರ್ಭದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕು ಎಂದು ಸಲಹೆ ನೀಡಿದ್ದಾರೆ.

ಹನಿಟ್ರ್ಯಾಪ್ ಯತ್ನದ ಬಗ್ಗೆ ಎಚ್ಚರ

ಸೇನಾ ಅಧಿಕಾರಿಗಳಿಗೆ, ಯೋಧರಿಗೆ ಹಾಗೂ ಸಿಬ್ಬಂದಿಗೆ ಯುವತಿಯರ ಮೂಲಕ ವಿಡಿಯೋ ಕಾಲ್ ಮಾಡಿಸಿ ಸ್ಕ್ರೀನ್ ಶೇರ್ ಮೂಲಕ ಮಾಹಿತಿ ಕದಿಯುವ ಸಾಧ್ಯತೆ ಇದೆ. ಇದರಿಂದ ಡೇಟಾಗಳು ಕೂಡ ಲೀಕ್ ಆಗುತ್ತವೆ. ಈ ವಿಚಾರದಲ್ಲಿ ಬಹಳ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಡಾ ಅನಂತ ಪ್ರಭು ಹೇಳಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂದೂರ್: ಹ್ಯಾಮರ್, ಲಾಯ್ಟರಿಂಗ್ ಮ್ಯುನಿಶನ್​​ಗಳ ತಯಾರಿಸಿದ್ದು ಬೆಂಗಳೂರಿನ ಕಂಪನಿಗಳು

ಭಾರತೀಯ ಸೇನೆ ಬುಧವಾರ ನಸುಕಿನಲ್ಲಿ ಆಪರೇಷನ್ ಸಿಂದೂರ್ ನಡೆಸಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ದಾಳಿಯಲ್ಲಿ ಕನಿಷ್ಠ 80 ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್