AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಯ ಕೋರ್ಟ್​ಗೆ ಹಾಜರಾಗಿದ್ದ ಡಿ ಕೆ ಶಿವಕುಮಾರ್; ನ್ಯಾಯಾಧೀಶರಿಂದ ಮನವರಿಕೆ

ನಿಮ್ಮದೇ ದೂರವಾಣಿ ಸಂಖ್ಯೆ ಎಂಬುದಕ್ಕೆ ದಾಖಲೆ ಕೊಟ್ಟಿದ್ದೀರಾ ಅಂತ ವಕೀಲರು ಪ್ರಶ್ನಿಸುತ್ತಾರೆ. ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಅವರ ಸಂಖ್ಯೆ ಅಲ್ಲದಿದ್ರೆ ನಿಮ್ಮ ಕಕ್ಷಿದಾರ ಕರೆ ಮಾಡಿದ್ದು ಏಕೆ ಅಂತ ಆರೋಪಿ ಪರ ವಕೀಲರಿಗೆ ಪ್ರಶ್ನೆ ಕೇಳಿದ್ದಾರೆ.

ಸುಳ್ಯ ಕೋರ್ಟ್​ಗೆ ಹಾಜರಾಗಿದ್ದ ಡಿ ಕೆ ಶಿವಕುಮಾರ್; ನ್ಯಾಯಾಧೀಶರಿಂದ ಮನವರಿಕೆ
ಡಿಕೆ ಶಿವಕುಮಾರ್
TV9 Web
| Updated By: sandhya thejappa|

Updated on:Oct 05, 2021 | 2:46 PM

Share

ಮಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕೋರ್ಟ್ಗೆ ಹಾಜರಾಗಿದ್ದರು. ಕೋರ್ಟ್ನಲ್ಲಿ ಸಾಕ್ಷಿ ಹೇಳಲು ಬಂದಿದ್ದ ಶಿವಕುಮಾರ್ಗೆ ವಕೀಲರು ಪ್ರಶ್ನಿಸಿದ್ದಾರೆ. ಸಾಕ್ಷ್ಯ ನುಡಿದ ನಂತರ ಡಿಕೆಶಿಗೆ, ಪ್ರಕರಣ ದಾಖಲಾದ ಬಳಿಕ ಅಧಿಕಾರಿ ಹೇಳಿಕೆ ಪಡೆದಿದ್ದಾರಾ? ಅಂತ ಆರೋಪಿ ಪರ ವಕೀಲರು ಪ್ರಶ್ನಿಸಿದ್ದಾರೆ. ಇದಕ್ಕೆ ಒಂದು ವರ್ಷದ ಬಳಿಕ ಹೇಳಿಕೆ ಪಡೆದಿದ್ದಾಗಿ ಉತ್ತರಿಸಿದ ಡಿಕೆಶಿ, ಆ ಅಧಿಕಾರಿ ಹೆಸರು ನೆನಪಿಲ್ಲವೆಂದು ತಿಳಿಸಿದ್ದಾರೆ.

ನಿಮ್ಮದೇ ದೂರವಾಣಿ ಸಂಖ್ಯೆ ಎಂಬುದಕ್ಕೆ ದಾಖಲೆ ಕೊಟ್ಟಿದ್ದೀರಾ ಅಂತ ವಕೀಲರು ಪ್ರಶ್ನಿಸುತ್ತಾರೆ. ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಅವರ ಸಂಖ್ಯೆ ಅಲ್ಲದಿದ್ರೆ ನಿಮ್ಮ ಕಕ್ಷಿದಾರ ಕರೆ ಮಾಡಿದ್ದು ಏಕೆ ಅಂತ ಆರೋಪಿ ಪರ ವಕೀಲರಿಗೆ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ನಿಮ್ಮ ಮೊಬೈಲ್ನಲ್ಲಿ ಕಾಲ್ ರೆಕಾರ್ಡ್ ಆಗುತ್ತಾ ಅಂತ ಆರೋಪಿ ಪರ ವಕೀಲ ಡಿಕೆಶಿಗೆ ಪ್ರಶ್ನಿಸಿದ್ದಾರೆ. ಆಗ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಅಂತ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕರ್ತ ಅಂತ ನೀವು ಸುಳ್ಳು ದೂರು ನೀಡಿದ್ದೀರಿ ಅಂತ ಆರೋಪಿ ಪರ ವಕೀಲ ಹೇಳುತ್ತಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ದೂರು ಕೊಟ್ಟಿದ್ದಾಗಿ ವಕೀಲರು ಆರೋಪಿಸುತ್ತಾರೆ. ಕರೆ ಮಾಡಿದ ಆರೋಪಿ ಪೂರ್ವಾಪರ ನನಗೆ ಗೊತ್ತಿಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಜೊತೆಗೆ ಆತ ಅವಾಚ್ಯ ಶಬ್ದ ಬಳಸಿದ ಕಾರಣಕ್ಕೆ ದೂರು ಕೊಟ್ಟೆ ಅಂತ ಕೋರ್ಟ್​ನಲ್ಲಿ ತಿಳಿಸಿದ್ದಾರೆ.

ಕೈಕೊಟ್ಟ ವಿದ್ಯುತ್ ಕೋರ್ಟ್ನಲ್ಲಿ ಡಿಕೆಶಿ ಸಾಕ್ಷ್ಯ ವಿಚಾರಣೆ ವೇಳೆ ವಿದ್ಯುತ್ ಕೈಕೊಡುತ್ತದೆ. ಈ ವೇಳೆ ವಿದ್ಯುತ್ ಸಮಸ್ಯೆಯ ಬಗ್ಗೆ ಜಡ್ಜ್ ಡಿಕೆಶಿಗೆ ಮನವರಿಕೆ ಮಾಡುತ್ತಾರೆ. ವಿದ್ಯುತ್ ಸಮಸ್ಯೆ ವಿಚಾರದಲ್ಲಿ ನಿಮಗೆ ಅವರು ಬೈದಿದ್ದು ತಪ್ಪು. ಸುಳ್ಯದಲ್ಲಿ ವಿದ್ಯುತ್ ಸಮಸ್ಯೆ ಎಷ್ಟಿದೆಯೆಂದು ಗೊತ್ತಿದೆಯಾ. ಇದನ್ನು ನೀವೇ ಈಗ ಸ್ವತಃ ಅನುಭವ ಮಾಡಿದ್ದೀರಿ. ಎಲ್ಲರೂ ಪ್ರತಿ ದಿನ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದಾರೆ. ನಿಮಗೂ ಇಂದು ವಿದ್ಯುತ್ ಸಮಸ್ಯೆ ಬಗ್ಗೆ ಅರಿವಾಗಿದೆ ಅಂತ ನ್ಯಾಯಾಧೀಶರು ಡಿ.ಕೆ.ಶಿವಕುಮಾರ್ಗೆ ಮಾಹಿತಿ ನೀಡಿದರು.

ಸಾಕ್ಷ್ಯ ಹೇಳಿ ಹೊರಬಂದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ನೀಡಿದರು. ಕಾನೂನಿಗೆ ತಲೆ ಬಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ನನ್ನನ್ನು ನಿಂದಿಸಿದ್ದ ವ್ಯಕ್ತಿ ಅಧಿಕಾರಿಗಳಿಗೆ ನಿಂದಿಸಿದ್ದ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಅಧಿಕಾರಿಗಳಿಂದ ದೂರು ನೀಡಲಾಗಿತ್ತು. ನಾನು ಸಚಿವನಾಗಿದ್ದಾಗ ಸಮಸ್ಯೆ ಬಗೆಹರಿಸಲು ಯತ್ನಿಸಿದ್ದೆ. ಈಗಿನ ಇಂಧನ ಸಚಿವರು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಅಂತ ಅಭಿಪ್ರಾಯಟ್ಟರು.

ಇದನ್ನೂ ಓದಿ

ಡಿಕೆ ಶಿವಕುಮಾರ್ ಮಂಗಳವಾರ ಸುಳ್ಯ ಕೋರ್ಟ್​ಗೆ ಹಾಜರು; ಕಾರಣ ಇಲ್ಲಿದೆ

ಓಟಿಟಿ ಮೇಲೆ ಹೆಚ್ಚಿತು ಸಿನಿ ಮಂದಿಯ ಪ್ರೀತಿ; ಬಹುನಿರೀಕ್ಷಿತ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​

Published On - 2:42 pm, Tue, 5 October 21

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ