AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ದೇವಸ್ಥಾನದ ತಡೆಗೋಡೆ ಕಟ್ಟುತ್ತಿದ್ದ ಮುಸ್ಲಿಂ ಯುವಕನ ಮೈಯಲ್ಲಿ ಬಂದ ದೈವ

ದೈವಸ್ಥಾನದ ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಒರಿಸ್ಸಾ ಮೂಲದ ಮುಸ್ಲಿಂ ಯುವಕನಿಗೆ ದೈವ ಅವೇಷವಾದ ಘಟನೆ ಬೆಳಕಿಗೆ ಬಂದಿದೆ. ಹೌದು.. ಮಂಗಳೂರು ಹೊರವಲಯದ ಪೆರ್ಮುದೆಯಲ್ಲಿನ ಪಿಲಿ ಚಾಮುಂಡಿ ದೇವಸ್ಥಾನದ ತಡೆಗೋಡೆ ನಿರ್ಮಿಸುವ ಸಂದರ್ಭದಲ್ಲಿ ಒರಿಸ್ಸಾ ಮೂಲದ ಯುವಕನ ಮೈಯಲ್ಲಿ ದೈವ ಅವೇಷ ಬಂದಿದೆ.

ಮಂಗಳೂರು: ದೇವಸ್ಥಾನದ ತಡೆಗೋಡೆ ಕಟ್ಟುತ್ತಿದ್ದ ಮುಸ್ಲಿಂ ಯುವಕನ ಮೈಯಲ್ಲಿ ಬಂದ ದೈವ
ಪೆರ್ಮುದೆಯಲ್ಲಿನ ಪಿಲಿ ಚಾಮುಂಡಿ ದೇವಸ್ಥಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 02, 2023 | 7:59 AM

Share

ಮಂಗಳೂರು, (ಅಕ್ಟೋಬರ್ 02): ದೈವಸ್ಥಾನದ (Temple) ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಒರಿಸ್ಸಾ ಮೂಲದ ಮುಸ್ಲಿಂ ಯುವಕನಿಗೆ ದೈವ 9daiva) ಅವೇಷವಾದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು (Mangaluru) ಹೊರವಲಯದ ಪೆರ್ಮುದೆಯಲ್ಲಿನ ಪಿಲಿ ಚಾಮುಂಡಿ ದೇವಸ್ಥಾನದಲ್ಲಿ(Permude Chamundi Temple) ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುವ ಸಂದರ್ಭದಲ್ಲಿ ಒರಿಸ್ಸಾ ಮೂಲದ ಯುವಕನ ಮೈಯಲ್ಲಿ ದೈವ ಅವೇಷ ಬಂದಿದೆ. ಪ್ರಶ್ನಾ ಚಿಂತನೆಯಲ್ಲಿ ಕಂಡುಕೊಂಡಾಗ ಇದು ಜಿಲ್ಲೆಯ ಪ್ರತಿಷ್ಟಿತ ಕಂಪನಿಯಾದ ಎಂ.ಆರ್.ಪಿ.ಎಲ್ ನಿಂದ ಬಂದ ಸಮಸ್ಯೆ ಎಂದು ತಿಳಿದುಬಂದಿದೆ.

ಕಳೆದ ಮೂರು ದಶಕಗಳ ಹಿಂದೆ, ಪ್ರತಿಷ್ಠಿತ ಎಂ.ಆರ್,ಪಿ,ಎಲ್ ಕಂಪನಿಗಾಗಿ ಜಮೀನು ಭೂಸ್ವಾಧೀನಗೊಂಡಿದ್ದು ಆ ಸಂದರ್ಭ ಅಲ್ಲಿದ್ದ ಪಿಲಿಚಾಮುಂಡಿ ದೈವಸ್ಥಾನ ಹಾಗೂ ಕೊಡಮಣಿತ್ತಾಯ ದೈವಸ್ಥಾನ ಪುನರ್ವಸತಿ ಪ್ರದೇಶದಲ್ಲಿನ ಅಂದರೆ ಪೆರ್ಮುದೆ ಸೋಮನಾಥ ಧಾಮಕ್ಕೆ ಸ್ಥಳಾಂತರಗೊಂಡು ಕಾಲ ಕಾಲಕ್ಕೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿತ್ತು. ಪೆರ್ಮುದೆ ಗ್ರಾಮಕ್ಕೆ ಸಂಬಂಧಿಸಿ ದೈವಗಳ ನಾಲ್ಕು ಗಡು ಇದ್ದು, ಪ್ರಸುತ್ತ ಕಾಯರ್ ಕಟ್ಟೆ ಎಂಬುದು ಕುತ್ತೆತ್ತೂರು ಗ್ರಾಮದ ಪೆರ್ಮುದೆ ಗಡುವಾಗಿದೆ. ಈ ಗಡು ಸ್ಥಳದಲ್ಲಿ ನಡೆಯುತ್ತಿದ್ದ ದೈವಾರಾಧನೆ ಪ್ರಕ್ರಿಯೆಗಳು ಕಳೆದ 18 ವರ್ಷಗಳಿಂದ ಸ್ಥಗಿತಗೊಂಡಿದೆ. ಭೂಸ್ವಾಧೀನಗೊಂಡ ಮತ್ತು ಎಂ ಆರ್ ಪಿ ಎಲ್ ಗೆ ಹತ್ತಿರವಾದ ಕಾರಣ ಇಲ್ಲಿ ನೇಮ ನಡೆಸಲು ಆಸಾದ್ಯವಾಗಿತ್ತು. ಇಲ್ಲಿನ ಬೌಗೋಳಿಕ ಸ್ಥಿತಿಗತಿಗಳೂ ಇದಕ್ಕೆ ಪ್ರಮುಖ ಕಾರಣವಾಗಿತ್ತು.

ಇದನ್ನೂ ಓದಿ: Kerala Onam bumper Lottery: ಕೇರಳ ತಿರುಓಣಂ ಬಂಪರ್ ಲಾಟರಿ ಡ್ರಾ: ಪುತ್ತೂರಿನ ಮೇಸ್ತ್ರಿ, ನಾಲ್ವರು ಹೆಣ್ಣು ಮಕ್ಕಳ ಚಂದ್ರಯ್ಯಗೆ 50 ಲಕ್ಷ ರೂ ತೃತೀಯ ಬಹುಮಾನ

ನೇಮ ಸ್ಥಗಿತಗೊಂಡ ನಂತರದ ಕಾಲದಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮತ್ತು ಕಂಪನಿ ವ್ಯಾಪ್ತಿಯಲ್ಲಿ ದೋಷ ದೃಷ್ಟಾಂತ ಕಂಡು ಬರಲು ಪ್ರಾರಂಭವಾಯಿತು. ಪಿಲಿಚಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಸಂದರ್ಭ ಕಾಯರ್ ಕಟ್ಟೆ ಗಡು ಸ್ಥಳದಲ್ಲಿ ನಡೆಯುತ್ತಿದ್ದ ಯಥಾ ಪ್ರಕಾರ ಮುಂದುವರಿದರೆ ಮಾತ್ರ ದೋಷಗಳಿಗೆ ಪರಿಹಾರ ಎಂಬ ದೈವದ ನುಡಿಯಾಗಿತ್ತು. ಈ ನಡುವೆ ಕಳೆದ ಎರಡು ತಿಂಗಳ ಹಿಂದೆ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಾಣ ಮಾಡುತ್ತಿದ್ದ ಸಂದರ್ಭ ಒರಿಸ್ಸಾ ಮೂಲದ ಮುಸ್ಲಿಂ ಯುವಕನಿಗೆ ದೈವ ಅವೇಷ ಬಂದಿದೆ.

ಈ ಬಗ್ಗೆ ಪೆರ್ಮುದೆ ಸೋಮನಾಥೇಶ್ವರ ದೇಗುಲದಲ್ಲಿ ಪ್ರಶ್ನಾಚಿಂತನೆ ಇರಿಸಿದಾಗಲೂ ಎಂ ಆರ್ ಪಿ.ಎಲ್ ಸಮೀಪದ ಗಡುಪಾಡಿನಲ್ಲಿ ನೇಮೋತ್ಸವ ಸ್ಥಗಿತಗೊಂಡಿರುವ ಕಾರಣ ಇಂತಹ ಸನ್ನವೇಶಗಳು ನಡೆಯುತ್ತಿವೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ