AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಗೆಲ್ಲಿಸುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣ: ವರನ ವಿರುದ್ಧ ದೂರು ದಾಖಲು

ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ "ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮಗೆ ನೀವು ನೀಡುವ ಉಡುಗೊರೆ" ಅಂತ ಮುದ್ರಿಸಿದಕ್ಕೆ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಗೆಲ್ಲಿಸುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣ: ವರನ ವಿರುದ್ಧ ದೂರು ದಾಖಲು
ಮದುವೆ ಆಮಂತ್ರಣ ಪತ್ರಿಕೆ
TV9 Web
| Edited By: ವಿವೇಕ ಬಿರಾದಾರ|

Updated on: Apr 30, 2024 | 11:34 AM

Share

ಮಂಗಳೂರು, ಏಪ್ರಿಲ್​ 30: ಮದುವೆ ಆಮಂತ್ರಣ ಪತ್ರಿಕೆಯಲ್ಲಿ (Marriage Investigation Card) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮತ ಹಾಕುವಂತೆ ಸಂದೇಶ ಮುದ್ರಿಸಿದ್ದ ವರನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (Uppinangady Police Station) ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್​ ಎಂಬುವರ ಮದುವೆ ಏ.18 ನಡೆದಿದೆ. ಮದುವೆ ಆಮಂತ್ರಣ ಪತ್ರಿಕೆಗಳು ಮಾರ್ಚ್ 1 ರಂದು ಮುದ್ರಿತವಾಗಿದ್ದವು. ಆಮಂತ್ರಣ ಪತ್ರಿಕೆಯಲ್ಲಿ “ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮಗೆ ನೀವು ನೀಡುವ ಉಡುಗೊರೆ” ಅಂತ ಮುದ್ರಿಸಿ ಹಂಚಿದ್ದರು.

ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಂತ ವರನ ವಿರುದ್ಧ ಏ.17ರಂದು ಚುನಾವಣಾ ನೋಡಲ್​ ಅಧಿಕಾರಿಗಳಿಗೆ ದೂರು ಬಂದಿದೆ. ಬಳಿಕ ಚುನಾವಣಾ ಅಧಿಕಾರಿಗಳು ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ವರನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.

ಇದನ್ನೂ ಓದಿ: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಕಿಡಿಕಾರಿದ ಬಿಜೆಪಿ

“ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕರ್ನಾಟಕ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ದಬ್ಬಾಳಿಕೆ ನಡೆಸುತ್ತಿದೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯವರ ಭಾವಚಿತ್ರ ಪ್ರಕಟಿಸಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಕೋರಿದ್ದಾರೆ. ಆದರೆ, ಸಿದ್ದರಾಮಯ್ಯ ಸರ್ಕಾರ ಇದರ ಮೇಲೂ ಕಳ್ಳಗಣ್ಣು ಬಿಟ್ಟು ವರನ ಮೇಲೆ ದೂರು ದಾಖಲಿಸಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿಯವರಿಗೆ ಸಿಗುತ್ತಿರುವ ವ್ಯಾಪಕ ಬೆಂಬಲ ನೋಡಿ ಕಾಂಗ್ರೆಸ್ಸಿಗರ ಕೈಯಲ್ಲಿ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ ಹೇಡಿ ಸರ್ಕಾರ!” ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು