AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಗೆಲ್ಲಿಸುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣ: ವರನ ವಿರುದ್ಧ ದೂರು ದಾಖಲು

ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ "ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮಗೆ ನೀವು ನೀಡುವ ಉಡುಗೊರೆ" ಅಂತ ಮುದ್ರಿಸಿದಕ್ಕೆ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಗೆಲ್ಲಿಸುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣ: ವರನ ವಿರುದ್ಧ ದೂರು ದಾಖಲು
ಮದುವೆ ಆಮಂತ್ರಣ ಪತ್ರಿಕೆ
TV9 Web
| Edited By: |

Updated on: Apr 30, 2024 | 11:34 AM

Share

ಮಂಗಳೂರು, ಏಪ್ರಿಲ್​ 30: ಮದುವೆ ಆಮಂತ್ರಣ ಪತ್ರಿಕೆಯಲ್ಲಿ (Marriage Investigation Card) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮತ ಹಾಕುವಂತೆ ಸಂದೇಶ ಮುದ್ರಿಸಿದ್ದ ವರನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (Uppinangady Police Station) ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್​ ಎಂಬುವರ ಮದುವೆ ಏ.18 ನಡೆದಿದೆ. ಮದುವೆ ಆಮಂತ್ರಣ ಪತ್ರಿಕೆಗಳು ಮಾರ್ಚ್ 1 ರಂದು ಮುದ್ರಿತವಾಗಿದ್ದವು. ಆಮಂತ್ರಣ ಪತ್ರಿಕೆಯಲ್ಲಿ “ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮಗೆ ನೀವು ನೀಡುವ ಉಡುಗೊರೆ” ಅಂತ ಮುದ್ರಿಸಿ ಹಂಚಿದ್ದರು.

ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಂತ ವರನ ವಿರುದ್ಧ ಏ.17ರಂದು ಚುನಾವಣಾ ನೋಡಲ್​ ಅಧಿಕಾರಿಗಳಿಗೆ ದೂರು ಬಂದಿದೆ. ಬಳಿಕ ಚುನಾವಣಾ ಅಧಿಕಾರಿಗಳು ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ವರನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.

ಇದನ್ನೂ ಓದಿ: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಕಿಡಿಕಾರಿದ ಬಿಜೆಪಿ

“ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕರ್ನಾಟಕ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ದಬ್ಬಾಳಿಕೆ ನಡೆಸುತ್ತಿದೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯವರ ಭಾವಚಿತ್ರ ಪ್ರಕಟಿಸಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಕೋರಿದ್ದಾರೆ. ಆದರೆ, ಸಿದ್ದರಾಮಯ್ಯ ಸರ್ಕಾರ ಇದರ ಮೇಲೂ ಕಳ್ಳಗಣ್ಣು ಬಿಟ್ಟು ವರನ ಮೇಲೆ ದೂರು ದಾಖಲಿಸಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿಯವರಿಗೆ ಸಿಗುತ್ತಿರುವ ವ್ಯಾಪಕ ಬೆಂಬಲ ನೋಡಿ ಕಾಂಗ್ರೆಸ್ಸಿಗರ ಕೈಯಲ್ಲಿ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ ಹೇಡಿ ಸರ್ಕಾರ!” ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!