ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಆರೋಪ: ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪ ಸಂಬಂಧ ನಾಲ್ವರು ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಿರಾಕಿಸಿದ್ದು, ಪ್ರಕರಣ ರದ್ದು ಕೋರಿದ್ದ ನಾಲ್ವರು ಆರೋಪಿಗಳ ಅರ್ಜಿ ವಜಾಗೊಳಿಸಿದೆ.

ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಆರೋಪ: ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್ (ಎಡ ಚಿತ್ರ)
Follow us
| Updated By: Rakesh Nayak Manchi

Updated on:Feb 17, 2023 | 8:51 PM

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಯತ್ನಿಸಿದ (Attempts to forcibly convert to Christianity) ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದು ಪಡಿಸುವಂತೆ ಕೋರಿ ಸಲ್ಲಿಸದ್ದ ನಾಲ್ವರು ಆರೋಪಿಗಳ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಹಿಂದೂ ವ್ಯಕ್ತಿಯೊಬ್ಬರ ಮನೆಯಲ್ಲಿ ಬೈಬಲ್ ಕೊಟ್ಟು ಬಲವಂತವಾಗಿ ಮತಾಂತರ ನಡೆಸಲು ಮುಂದಾಗಿದ್ದ ಆರೋಪಿಗಳಾದ ಕೆ.ಜೆ.ಕುಂಜುಮೋನ್, ಲೇನಿ ಕುಂಜುಮೋನ್, ಪಿ.ಜೆ.ಸೈನು, ಮೇರಿ ಕೆ.ಜಾನ್ ಎಂಬವರು ಪ್ರಕರಣ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ರದ್ದತಿಗೆ ನಿರಾಕರಿಸಿ ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿದೆ.

ಉಪ್ಪಿನಂಗಡಿಯಲ್ಲಿ ಹಿಂದೂ ವ್ಯಕ್ತಿಯ ಮನೆಗೆ ಹೋದ ಕೆ.ಜೆ.ಕುಂಜುಮೋನ್, ಲೇನಿ ಕುಂಜುಮೋನ್, ಪಿ.ಜೆ.ಸೈನು, ಮೇರಿ ಕೆ.ಜಾನ್ ಬೈಬಲ್ ಕೊಟ್ಟು ಕ್ರಿಸ್ತನೊಬ್ಬನೇ ದೇವರೆಂದು ಬೋಧಿಸಿ ಹಿಂದೂ ದೇವರನ್ನು ನಂಬದಂತೆ ಒತ್ತಾಯಿಸಿದ್ದರು. ಮತಾಂತರದ ಬಗ್ಗೆ ಪ್ರಶ್ನಿಸಿದಾಗ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿತ್ತು. ಘಟನೆ ಸಂಬಂಧ 2011ರಲ್ಲಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Fri, 17 February 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ