AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಆರೋಪ: ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪ ಸಂಬಂಧ ನಾಲ್ವರು ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಿರಾಕಿಸಿದ್ದು, ಪ್ರಕರಣ ರದ್ದು ಕೋರಿದ್ದ ನಾಲ್ವರು ಆರೋಪಿಗಳ ಅರ್ಜಿ ವಜಾಗೊಳಿಸಿದೆ.

ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಆರೋಪ: ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್ (ಎಡ ಚಿತ್ರ)
TV9 Web
| Edited By: Rakesh Nayak Manchi|

Updated on:Feb 17, 2023 | 8:51 PM

Share

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಯತ್ನಿಸಿದ (Attempts to forcibly convert to Christianity) ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದು ಪಡಿಸುವಂತೆ ಕೋರಿ ಸಲ್ಲಿಸದ್ದ ನಾಲ್ವರು ಆರೋಪಿಗಳ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಹಿಂದೂ ವ್ಯಕ್ತಿಯೊಬ್ಬರ ಮನೆಯಲ್ಲಿ ಬೈಬಲ್ ಕೊಟ್ಟು ಬಲವಂತವಾಗಿ ಮತಾಂತರ ನಡೆಸಲು ಮುಂದಾಗಿದ್ದ ಆರೋಪಿಗಳಾದ ಕೆ.ಜೆ.ಕುಂಜುಮೋನ್, ಲೇನಿ ಕುಂಜುಮೋನ್, ಪಿ.ಜೆ.ಸೈನು, ಮೇರಿ ಕೆ.ಜಾನ್ ಎಂಬವರು ಪ್ರಕರಣ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ರದ್ದತಿಗೆ ನಿರಾಕರಿಸಿ ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿದೆ.

ಉಪ್ಪಿನಂಗಡಿಯಲ್ಲಿ ಹಿಂದೂ ವ್ಯಕ್ತಿಯ ಮನೆಗೆ ಹೋದ ಕೆ.ಜೆ.ಕುಂಜುಮೋನ್, ಲೇನಿ ಕುಂಜುಮೋನ್, ಪಿ.ಜೆ.ಸೈನು, ಮೇರಿ ಕೆ.ಜಾನ್ ಬೈಬಲ್ ಕೊಟ್ಟು ಕ್ರಿಸ್ತನೊಬ್ಬನೇ ದೇವರೆಂದು ಬೋಧಿಸಿ ಹಿಂದೂ ದೇವರನ್ನು ನಂಬದಂತೆ ಒತ್ತಾಯಿಸಿದ್ದರು. ಮತಾಂತರದ ಬಗ್ಗೆ ಪ್ರಶ್ನಿಸಿದಾಗ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿತ್ತು. ಘಟನೆ ಸಂಬಂಧ 2011ರಲ್ಲಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Fri, 17 February 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ