AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಅರಣ್ಯಾಧಿಕಾರಿ ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on:Oct 09, 2023 | 8:41 PM

Share

ಮಂಗಳೂರು, ಅ.9: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರು ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ಜಾಟಾಪಟಿ ವಿಚಾರ ಹಿನ್ನೆಲೆ ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಮನೆಯ ಪೌಂಡೇಶನ್ ಸಹಿತ ಅರಣ್ಯಾಧಿಕಾರಿಗಳು ತೆರವು ಮಾಡಿದ್ದರು.

ಇದನ್ನೂ ಓದಿ: ನೋಟಿಸ್‌ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತಗೊಂಡ ಶಾಸಕ; ಇಲ್ಲಿದೆ ವಿಡಿಯೋ

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ ಅವರು ಅರಣ್ಯ ಅಧಿಕಾರಿಗಳ ಎದುರೇ ಮತ್ತೆ ಮನೆ ನಿರ್ಮಿಸಲು ಸೂಚಿಸಿದ್ದರು. ಹೀಗಾಘಿ ಇಂದು ಕೂಡ ತೆರವು ಕಾರ್ಯಾಚರಣೆಗೆ ತೆರಳಿದ ಅರಣ್ಯಾಧಿಕಾರಿಗಳು ವಿರುದ್ಧ ಬಿಜೆಪಿ ಸಿಡಿದೆದ್ದಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಗಿರಥಿ ಜಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ, ಬೆಳ್ತಂಗಡಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ. ಅಲ್ಲದೆ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅವರು ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.

ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ

ಅರಣ್ಯ ಮೀಸಲು ಪ್ರದೇಶದ ವಿಚಾರದಲ್ಲಿ ಜಟಾಪಟಿಗೆ ರಾಜಕೀಯ ನಾಯಕರ ಎಂಟ್ರಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮೂರು KSRP ತುಕಡಿ ರೆಡಿ ಮಾಡಿದ್ದಾರೆ. ಡಿಎಫ್ಓ ಬರುವಿಕೆಗಾಗಿ ಕಾಯುತ್ತಿರುವ ಅರಣ್ಯಾಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಮನೆ ತೆರವು ಮಾಡಲಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲಿ ಲಾಠಿ ಚಾರ್ಜ್ ನಡೆಸಲು ಸೂಚನೆ ನೀಡಲಾಗಿದೆ.

ಪ್ರತಾಪ್ ಸಿಂಹ ನಾಯಕ್ ಮತ್ತು ಅಧಿಕಾರಿಗಳ ನಡುವೆ ಜಟಾಪಟಿ

ತೀವ್ರ ವಿರೋಧದ ನಡುವೆಯೂ ಅರಣ್ಯಾಧಿಕಾರಿಗಳು ಮನೆ ಪಂಚಾಂಗ ತೆರವಿಗೆ ಮುಂದಾದರು. ಈ ವೇಳೆ ಬಿಜೆಪಿ ನಾಯಕರು ಮತ್ತು ಅರಣ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ,ಬಿಜೆಪಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಹಾಗೂ ಅರಣ್ಯಾಧಿಕಾರಿಗಳ ನಡುವೆ ನೂಕಾಟ ತಳ್ಳಾಟ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Mon, 9 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ