ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಅರಣ್ಯಾಧಿಕಾರಿ ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

ಮಂಗಳೂರು, ಅ.9: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರು ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ಜಾಟಾಪಟಿ ವಿಚಾರ ಹಿನ್ನೆಲೆ ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಮನೆಯ ಪೌಂಡೇಶನ್ ಸಹಿತ ಅರಣ್ಯಾಧಿಕಾರಿಗಳು ತೆರವು ಮಾಡಿದ್ದರು.

ಇದನ್ನೂ ಓದಿ: ನೋಟಿಸ್‌ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತಗೊಂಡ ಶಾಸಕ; ಇಲ್ಲಿದೆ ವಿಡಿಯೋ

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ ಅವರು ಅರಣ್ಯ ಅಧಿಕಾರಿಗಳ ಎದುರೇ ಮತ್ತೆ ಮನೆ ನಿರ್ಮಿಸಲು ಸೂಚಿಸಿದ್ದರು. ಹೀಗಾಘಿ ಇಂದು ಕೂಡ ತೆರವು ಕಾರ್ಯಾಚರಣೆಗೆ ತೆರಳಿದ ಅರಣ್ಯಾಧಿಕಾರಿಗಳು ವಿರುದ್ಧ ಬಿಜೆಪಿ ಸಿಡಿದೆದ್ದಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಗಿರಥಿ ಜಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ, ಬೆಳ್ತಂಗಡಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ. ಅಲ್ಲದೆ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅವರು ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.

ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ

ಅರಣ್ಯ ಮೀಸಲು ಪ್ರದೇಶದ ವಿಚಾರದಲ್ಲಿ ಜಟಾಪಟಿಗೆ ರಾಜಕೀಯ ನಾಯಕರ ಎಂಟ್ರಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮೂರು KSRP ತುಕಡಿ ರೆಡಿ ಮಾಡಿದ್ದಾರೆ. ಡಿಎಫ್ಓ ಬರುವಿಕೆಗಾಗಿ ಕಾಯುತ್ತಿರುವ ಅರಣ್ಯಾಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಮನೆ ತೆರವು ಮಾಡಲಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲಿ ಲಾಠಿ ಚಾರ್ಜ್ ನಡೆಸಲು ಸೂಚನೆ ನೀಡಲಾಗಿದೆ.

ಪ್ರತಾಪ್ ಸಿಂಹ ನಾಯಕ್ ಮತ್ತು ಅಧಿಕಾರಿಗಳ ನಡುವೆ ಜಟಾಪಟಿ

ತೀವ್ರ ವಿರೋಧದ ನಡುವೆಯೂ ಅರಣ್ಯಾಧಿಕಾರಿಗಳು ಮನೆ ಪಂಚಾಂಗ ತೆರವಿಗೆ ಮುಂದಾದರು. ಈ ವೇಳೆ ಬಿಜೆಪಿ ನಾಯಕರು ಮತ್ತು ಅರಣ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ,ಬಿಜೆಪಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಹಾಗೂ ಅರಣ್ಯಾಧಿಕಾರಿಗಳ ನಡುವೆ ನೂಕಾಟ ತಳ್ಳಾಟ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Mon, 9 October 23

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us