AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬುರುಡೆ ಕೇಸ್​: ಮಾಸ್ಕ್​​ ಮ್ಯಾನ್​​ ಚಿನ್ನಯ್ಯಗೆ ಬಿಗ್​ ರಿಲೀಫ್​

ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್​ಮ್ಯಾನ್​​​ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಬಿಗ್​​ ರಿಲೀಫ್​ ನೀಡಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಎಸ್​​ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್​​ ಸೀಟ್​ ಸಲ್ಲಿಕೆ ಮಾಡಿತ್ತು. ಆ ನಡುವೆಯೂ ಚಿನ್ನಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಧರ್ಮಸ್ಥಳ ಬುರುಡೆ ಕೇಸ್​: ಮಾಸ್ಕ್​​ ಮ್ಯಾನ್​​ ಚಿನ್ನಯ್ಯಗೆ ಬಿಗ್​ ರಿಲೀಫ್​
ಚಿನ್ನಯ್ಯ
ಪ್ರಸನ್ನ ಹೆಗಡೆ
|

Updated on:Nov 24, 2025 | 7:32 PM

Share

ಮಂಗಳೂರು, ನವೆಂಬರ್​ 24: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್​ಮ್ಯಾನ್​​​ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷದ ಬಾಂಡ್ ಒದಗಿಸುವುದು ಸೇರಿ 12 ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಎಸ್​​ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು ಎಂಬುದಿಲ್ಲಿ ಗಮನಾರ್ಹ.

ಚಿನ್ನಯ್ಯನಿಗೆ ಕೋರ್ಟ್​ ಹಾಕಿರುವ ಷರತ್ತುಗಳು

  • ಮುಂದೆ ಇದೇ ರೀತಿಯ ಅಪರಾಧಕ್ಕೆ ಕೈ ಹಾಕಬಾರದು
  • ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಓಡಿಹೋಗುವುದು, ಸ್ಥಳ ಬಿಟ್ಟು ಮರೆಮಾಡಿಕೊಳ್ಳುವುದು ಬೇಡ
  • Prosecution witnesses‌ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರುವ ಕೆಲಸ ಮಾಡಬಾರದು
  • ಕೇಸಿಗೆ ಸಂಬಂಧಿಸಿದ ದಾಖಲೆ ಅಥವಾ ಪುರಾವೆಗಳನ್ನು ಅಳಿಸುವುದು / ನಾಶಗೊಳಿಸುವುದು ಬೇಡ
  • IO (Investigating Officer) ಕರೆ ಮಾಡಿದಾಗ ಹಾಜರಾಗಬೇಕು, ತನಿಖೆಗೆ ತೊಂದರೆ ಕೊಡಬಾರದು
  • ಕೋರ್ಟ್ ದಿನಾಂಕಗಳಿಗೆ ತಪ್ಪದೇ ಹಾಜರಾಗಬೇಕು. ಕೋರ್ಟ್ ಮನ್ನಿಸಿದಾಗ ಮಾತ್ರ ಹಾಜರಾಗದೇ ಇರಬಹುದು
  • ಚಿನ್ನಯ್ಯ ಹಾಗೂ ಜಾಮೀನಾದರೂ ಕೂಡ ಆಧಾರ್, ಮತದಾರರ ಗುರುತಿನ ಚೀಟಿಯ ಪುರಾವೆ ಕೊಡಬೇಕು
  • ವಿಳಾಸದಲ್ಲಿ ಬದಲಾವಣೆ ಬಂದರೆ ಕೋರ್ಟ್‌ಗೆ ತಿಳಿಸಬೇಕು
  • ಮೊಬೈಲ್ ನಂಬರ್ / ವಾಟ್ಸ್ಯಾಪ್​ / ಇಮೇಲ್ ಮಾಹಿತಿ ಕೊಡಬೇಕು
  • Court jurisdictionnನಿಂದ ಹೊರಗೆ ಹೋಗಬಾರದು
  • ಕೇಸ್‌ ಬಗ್ಗೆ ಮಾಧ್ಯಮಕ್ಕೆ ಮಾತನಾಡಬಾರದು
  • ಬೇಲ್‌ ಮೇಲೆ ಬಿಡುಗಡೆ ಆದ ನಂತರ ಬದಲಿ ದಿನಗಳಲ್ಲಿ (ದಿನ ಬಿಟ್ಟು ದಿನ) ಪೊಲೀಸ್​​ ಠಾಣೆಗೆ ಹಾಜರಾಗಬೇಕು

ಇದನ್ನೂ ಓದಿ: ಧರ್ಮಸ್ಥಳ ಕೇಸ್​: ಚಾರ್ಜ್​ಶೀಟ್ ಸಲ್ಲಿಕೆ, ಕೋರ್ಟ್​ಗೆ ಎಸ್ಐಟಿ ಮಹತ್ವದ ಮನವಿ

ಈಗಾಗಲೇ ಚಾರ್ಜ್​​ಶೀಟ್​​ ಸಲ್ಲಿಸಿರೋ SIT

ಶವ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್​ಐಟಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ತಂಡ 7 ಫೈಲ್​ಗಳುಳ್ಳ 3,932 ಪುಟಗಳ ಪ್ರಾಥಮಿಕ ಹಂತದ ದೋಷಾರೋಪ ಪಟ್ಟಿಯನ್ನ ಕೋರ್ಟ್​ಗೆ ಸಲ್ಲಿಸಿದೆ. ಆರಂಭದಲ್ಲಿ ಚಿನ್ನಯ್ಯನ ಹೇಳಿಕೆ, ಮಹಜರು, 17 ಹೆಚ್ಚು ಜಾಗದಲ್ಲಿ ನಡೆದಿದ್ದ ಸಮಾಧಿ ಶೋಧ, ಆತನ ಸಂಪರ್ಕದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿ ಎಲ್ಲರ ಹೇಳಿಕೆಗಳನ್ನ ವರದಿಯಲ್ಲಿ ಉಲ್ಲೇಖಿಸಿದೆ. ಕೆಲ ಆರೋಪಿಗಳ ವಿಚಾರಣೆ ಇನ್ನು ಬಾಕಿ ಇದೆ. ಜೊತೆಗೆ ಲ್ಯಾಬ್ ರಿಪೋರ್ಟ್ ಕೂಡ ಇನ್ನು ಬಂದಿಲ್ಲ. ಆದ್ದರಿಂದ ತನಿಖೆ ಮುಂದುವರೆಸಲು ಇನ್ನು ಕಾಲಾವಕಾಶ ಬೇಕು ಅಂತಾ ಕೇಳಿದ್ದು, ಸಂಪೂರ್ಣ ತನಿಖೆ ಬಳಿಕ ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಸಲ್ಲಿಸುತ್ತೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:47 pm, Mon, 24 November 25

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​