ದಕ್ಷಿಣ ಕನ್ನಡಕ್ಕೆ ಹಾರ್ಟ್ ಅಟ್ಯಾಕ್ ಶಾಕ್: ಒಂದೇ ವರ್ಷದಲ್ಲಿ ಶೇ.120ರಷ್ಟು ಭಾರಿ ಏರಿಕೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಶೇ.120ರಷ್ಟು ಭಾರಿ ಏರಿಕೆ ಕಂಡಿದೆ. ಕೇವಲ ಒಂದು ವರ್ಷದಲ್ಲಿ 3,278 ರಿಂದ 7,212ಕ್ಕೆ ಜಿಗಿದಿದ್ದು, ಮಂಗಳೂರಿನ ವೆನ್ಲಾಕ್ ಸೇರಿದಂತೆ ಆಸ್ಪತ್ರೆಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡಿವೆ. ಜೀವನಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಿ, ಎದೆನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಲು ಆರೋಗ್ಯ ಇಲಾಖೆ ಮನವಿ ಮಾಡಿದೆ.

ದಕ್ಷಿಣ ಕನ್ನಡಕ್ಕೆ ಹಾರ್ಟ್ ಅಟ್ಯಾಕ್ ಶಾಕ್: ಒಂದೇ ವರ್ಷದಲ್ಲಿ ಶೇ.120ರಷ್ಟು ಭಾರಿ ಏರಿಕೆ!
ಸಾಂದರ್ಭಿಕ ಚಿತ್ರ

Updated on: Apr 24, 2026 | 4:36 PM

ಮಂಗಳೂರು, ಏ.24 : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಸುನಾಮಿಯಂತೆ ಅಪ್ಪಳಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಪ್ರಮಾಣದಲ್ಲಿ ಬರೋಬ್ಬರಿ ಶೇ. 120ರಷ್ಟು ಭಾರಿ ಏರಿಕೆಯಾಗಿರುವುದು ಇತ್ತೀಚಿನ ಆರೋಗ್ಯ ಅಂಕಿಅಂಶಗಳಿಂದ ಬಹಿರಂಗವಾಗಿದೆ. ಈ ಬಗ್ಗೆ ದಾಯ್ಜಿವರ್ಲ್ಡ್ ವರದಿಯನ್ನು ಮಾಡಿದೆ. ಇದಿಗ ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಆರೋಗ್ಯ ಇಲಾಖೆಯು ಎರಡು ಅವಧಿಗಳ (ಏಪ್ರಿಲ್ 2024 – ಮಾರ್ಚ್ 2025 ಮತ್ತು ಏಪ್ರಿಲ್ 2025 – ಫೆಬ್ರವರಿ 2026) ನಡುವೆ ನಡೆಸಿದ ತುಲನಾತ್ಮಕ ವರದಿಯಲ್ಲಿ ಈ ಆಘಾತಕಾರಿ ಸತ್ಯ ಹೊರಬಂದಿದೆ. ಜಿಲ್ಲೆಯಲ್ಲಿ ಒಟ್ಟು ಹೃದಯಾಘಾತ ಪ್ರಕರಣಗಳ ಸಂಖ್ಯೆ 3,278 ರಿಂದ 7,212 ಕ್ಕೆ ಜಿಗಿದಿದೆ ಎಂದು ವರದಿ ಹೇಳಿದೆ.

ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಒಟ್ಟು ಪ್ರಕರಣಗಳು: 1,752 ರಿಂದ 3,320 ಕ್ಕೆ ಏರಿಕೆ.

STEMI (ತೀವ್ರ ಹೃದಯಾಘಾತ): 400 ರಿಂದ 908 ಕ್ಕೆ ಹೆಚ್ಚಳ.

ಇತರ ಹೃದಯಾಘಾತಗಳು: 1,352 ರಿಂದ 2,412 ಕ್ಕೆ ಏರಿಕೆ.

ಕೇವಲ ಮಂಗಳೂರು ಮಾತ್ರವಲ್ಲದೆ ಜಿಲ್ಲೆಯ ಇತರ ತಾಲೂಕುಗಳಲ್ಲೂ ಪ್ರಕರಣಗಳು ಹೆಚ್ಚುತ್ತಿವೆ:

ಬಂಟ್ವಾಳ ತಾಲೂಕು ಆಸ್ಪತ್ರೆ: 552 ರಿಂದ 850 ಪ್ರಕರಣಗಳು.

ಸುಳ್ಯ ತಾಲೂಕು ಆಸ್ಪತ್ರೆ: 664 ರಿಂದ 720 ಪ್ರಕರಣಗಳು.

ಬೆಳ್ತಂಗಡಿ ತಾಲೂಕು ಆಸ್ಪತ್ರೆ: 310 ರಿಂದ 350 ಪ್ರಕರಣಗಳು.

ಇದನ್ನೂ ಓದಿ: “ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ”: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ

ಖಾಸಗಿ ಆಸ್ಪತ್ರೆಗಳ ಅಂಕಿಅಂಶಗಳನ್ನು ಗಮನಿಸಿದರೆ, ಅಲ್ಲಿಯೂ 1,972 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 1,056 ತೀವ್ರ ಸ್ವರೂಪದ ಹೃದಯಾಘಾತಗಳಾಗಿವೆ. ಕೇವಲ 11 ತಿಂಗಳ ಅವಧಿಯಲ್ಲಿ ಪ್ರಕರಣಗಳು ಇಷ್ಟೊಂದು ಪ್ರಮಾಣದಲ್ಲಿ ದ್ವಿಗುಣಗೊಂಡಿರುವುದು ಆರೋಗ್ಯ ಇಲಾಖೆಯನ್ನು ಚಿಂತೆಗೀಡುಮಾಡಿದೆ. ಜೀವನಶೈಲಿ ಬದಲಾವಣೆ, ಆಹಾರ ಪದ್ಧತಿ ಅಥವಾ ಒತ್ತಡ ಇವುಗಳಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಎದೆಯ ನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us