AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಿಂದ ನಕ್ಸಲರನ್ನು ವಶಕ್ಕೆ ಪಡೆದ ದಕ್ಷಿಣ ಕನ್ನಡ ಪೊಲೀಸ್: ನಕ್ಸಲ್ ಮುಕ್ತ ರಾಜ್ಯದಲ್ಲಿ ಮತ್ತೇನಿದು ಬೆಳವಣಿಗೆ!

ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ ಎಂದು ಈಗಾಗಲೇ ಹೇಳಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿತ್ತು. ಆನಂತರ, ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ತೆಗೆದುಹಾಕಬೇಕು, ಇನ್ನು ಅದರ ಅಗತ್ಯ ಇಲ್ಲ ಎಂಬ ಒತ್ತಾಯಗಳೂ ಕೇಳಿಬಂದಿದ್ದವು. ಆದರೆ, ಇದೀಗ ಮತ್ತೆ ನಕ್ಸಲ್ ವಿಚಾರ ಸುದ್ದಿಯಲ್ಲಿದೆ. ಯಾಕಾಗಿ? ಕಾರಣ ಏನು? ವಿವರಗಳು ಇಲ್ಲಿವೆ.

ಕೇರಳದಿಂದ ನಕ್ಸಲರನ್ನು ವಶಕ್ಕೆ ಪಡೆದ ದಕ್ಷಿಣ ಕನ್ನಡ ಪೊಲೀಸ್: ನಕ್ಸಲ್ ಮುಕ್ತ ರಾಜ್ಯದಲ್ಲಿ ಮತ್ತೇನಿದು ಬೆಳವಣಿಗೆ!
ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತಂದ ಪೊಲೀಸರು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on:Apr 07, 2025 | 2:12 PM

ಬೆಳ್ತಂಗಡಿ, ಏಪ್ರಿಲ್ 7: ಮೂರು ನಕ್ಸಲ್ (Naxal) ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ (Belthangady ಪೊಲೀಸರು ಕೇರಳ (Kerala) ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿದ್ದಾರೆ‌. 8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಬಂಧಿಸಿದ್ದರು. ನಂತರ ಬಂಧಿತರನ್ನು ತ್ರಿಶೂರ್ ಜೈಲಿನಲ್ಲಿರಿಸಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ, ಸಾವಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿದೆ.

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್​ಗೆ 2012-2013 ರಲ್ಲಿ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಕೇರಳ ರಾಜ್ಯದಿಂದ ಅಲ್ಲಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ತಂಡಕ್ಕೆ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲು ಇಬ್ಬರು ನಕ್ಸಲರನ್ನು ಒಪ್ಪಿಸಿದೆ. ಬೆಳ್ತಂಗಡಿ, ವೇಣೂರು, ಧರ್ಮಸ್ಥಳ , ಪುಂಜಾಲಕಟ್ಟೆ ಪೊಲೀಸರು ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ
Image
ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
ಬೆಂಗಳೂರಿನಲ್ಲಿ ಚಿಕೂನ್ ಗುನ್ಯಾ, ಡೆಂಗ್ಯೂ ಹೆಚ್ಚಳ: ವಾರದಲ್ಲಿ 100 ಕೇಸ್
Image
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ

ಇದನ್ನೂ ಓದಿ: ಸಶಸ್ತ್ರ ಹೋರಾಟಕ್ಕೆ ಧುಮುಕಿದ್ಯಾಕೆ? ಶರಣಾಗುತ್ತಿರುವ 6 ನಕ್ಸಲರ ಬಗ್ಗೆ ಒಂದಿಷ್ಟು ಮಾಹಿತಿ

ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಜನವರಿಯಲ್ಲಿ ಸಮ್ಮತಿಸಿದ್ದರು. ಅದರಂತೆ ಶರಣಾಗತಿ ಪ್ರಕ್ರಿಯೆಯೂ ನಡೆದಿತ್ತು. ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗಿದ್ದರು. ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Mon, 7 April 25