AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಹಿಂದೂ ರಾಷ್ಟ್ರ ಅಭಿಯಾನದ ವಿರುದ್ಧ ಕ್ರಮಕ್ಕೆ ಎಸ್​​ಡಿಪಿಐ ಆಗ್ರಹ

‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ದ ಮೂಲಕ ಬಲಪಂಥೀಯ ಹಿಂದೂ ಸಂಘಟನೆ ‘ಹಿಂದೂ ಜಾಗೃತಿ ಸಮಿತಿ’ಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಅಭಿಯಾನವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪೊಲೀಸರನ್ನು ಆಗ್ರಹಿಸಿದೆ.

Mangaluru: ಹಿಂದೂ ರಾಷ್ಟ್ರ ಅಭಿಯಾನದ ವಿರುದ್ಧ ಕ್ರಮಕ್ಕೆ ಎಸ್​​ಡಿಪಿಐ ಆಗ್ರಹ
ಮಂಗಳೂರಿನಲ್ಲಿ ‘ಹಿಂದೂ ಜಾಗೃತಿ ಸಮಿತಿ’ ಹಾಕಿರುವ ಬ್ಯಾನರ್
Ganapathi Sharma
|

Updated on: Mar 08, 2023 | 5:04 PM

Share

ಮಂಗಳೂರು: ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ದ (Hindu Rashtra Awareness Campaign) ಮೂಲಕ ಬಲಪಂಥೀಯ ಹಿಂದೂ ಸಂಘಟನೆ ‘ಹಿಂದೂ ಜಾಗೃತಿ ಸಮಿತಿ’ಯು (Hindu Janajagruti Samiti) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಅಭಿಯಾನವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪೊಲೀಸರನ್ನು ಆಗ್ರಹಿಸಿದೆ. ಮಾರ್ಚ್​​ 5ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ದ ಕಾರ್ಯಕ್ರಮ ನಡೆಸಲಾಗಿದ್ದು, ದ್ವೇಷ ಭಾಷಣ ಮಾಡಲಾಗಿದೆ ಎಂದು ಎಸ್​​ಡಿಪಿಐ ಆರೋಪಿಸಿದೆ. ಸನಾತನ ಸಂಸ್ಥೆಯು ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ. ಭಾರತವು ಜಾತ್ಯತೀತ ದೇಶ. ಇದನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತೇವೆ ಎನ್ನುವುದು ಸಂವಿಧಾನಕ್ಕೆ ವಿರುದ್ಧವಾದದ್ದು ಹಾಗೂ ಕಾನೂನುಬಾಹಿರ ಎಂದು ಎಸ್​ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಹೇಳಿದ್ದಾರೆ.

ಬಲಪಂಥೀಯ ಸಂಘಟನೆ ಮತ್ತು ಅದರ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಮತ್ತು ಪೊಲೀಸರನ್ನು ಒತ್ತಾಯಿಸುತ್ತೇವೆ. ಇದೊಂದು ಸೂಕ್ಷ್ಮ ವಿಷಯವಾದದ್ದರಿಂದ ರಾಷ್ಟ್ರೀಯ ತನಿಖಾ ದಳ (NIA) ಈ ಬಗ್ಗೆ ಗಮನಹರಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಾರ್ಚ್​ 12ರಂದು ಕದ್ರಿಯಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ ಕಾರ್ಯಕ್ರಮ ನಡೆಯಲಿದೆ ಎಂಬ ಬಗ್ಗೆ ಹಿಂದೂ ಜಾಗೃತಿ ಸಮಿತಿಯು ಮಂಗಳೂರಿನಲ್ಲಿ ಪೋಸ್ಟರ್​​ಗಳನ್ನೂ ಪ್ರಕಟಿಸಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: NIA Raid: ಬಿಹಾರದಲ್ಲಿ ಪಿಎಫ್​​ಐ ಚಟುವಟಿಕೆ; ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಐವರು ಪಿಎಫ್​ಐ ಕಾರ್ಯಕರ್ತರ ಬಂಧಿಸಿದ ಎನ್​ಐಎ

ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದಲ್ಲಿ ಪಾಲ್ಗೊಂಡ ಕಾರ್ಯಕ್ರಮದಲ್ಲಿ ಅಶಾಂತಿ ಸೃಷ್ಟಿಸಲು ಸಂಚು ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಫರಂಗಿಪೇಟೆ ಅವರನ್ನೂ ಎನ್​ಐಎ ಅಧಿಕಾರಿಗಳು ಇತ್ತೀಚೆಗೆ ತನಿಖೆಗೆ ಒಳಪಡಿಸಿದ್ದರು.

ಬಿಹಾರದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎರಡು ದಿನ ಹಿಂದಷ್ಟೇ ಕೇರಳದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ದಾಳಿ, ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಐವರನ್ನು ಮಂಗಳವಾರ ಬಂಧಿಸಿದ್ದರು. ಇದರ ಬೆನ್ನಲ್ಲೇ, ಹಿಂದೂ ಜಾಗೃತಿ ಸಮಿತಿಯವರ ಅಭಿಯಾನಕ್ಕೆ ಸಂಬಂಧಿಸಿ ಎಸ್​ಡಿಪಿಐ ಧ್ವನಿಯೆತ್ತಿದೆ.

ಬಿಹಾರದ ಪುಲ್ವಾರಿಶರೀಫ್ ಮತ್ತು ಮೋತಿಹರಿಯಲ್ಲಿ ಪಿಎಫ್​ಐ ಚಟುವಟಿಕೆ ಸಕ್ರಿಯವಾಗಿರುವುದನ್ನು ಗಮನಿಸಲಾಗಿತ್ತು. ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ದಿಷ್ಟ ಸಮುದಾಯದ ಯುವಕರ ಹತ್ಯೆಗೆ ಇತ್ತೀಚೆಗೆ ಬಂದೂಕು ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲಾಗಿತ್ತು. ಇವುಗಳ ಜಾಡು ಹಿಡಿದು ದಕ್ಷಿಣ ಕನ್ನಡ ಮತ್ತು ಕಾಸರಗೋಡಿನಲ್ಲಿ ದಾಳಿ ನಡೆಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ. ಕಾಸರಗೋಡು, ದಕ್ಷಿಣ ಕನ್ನಡದಿಂದ ಬಂಧಿತರಾದವರು ಪಿಎಫ್​ಐ ಸಂಚಿನಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿದ್ದಾರೆ. ವಿದೇಶಗಳಿಂದ ನಿಧಿ ಪಡೆದು ಸಂಘಟನೆಯ ನಾಯಕರಿಗೆ ಹಂಚಿದ ಆರೋಪ ಅವರ ಮೇಲಿದೆ ಎಂದೂ ಎನ್​ಐಎ ಪ್ರಕಟಣೆ ತಿಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ