AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ಸುಳ್ಯ ಪೇಟೆಯಲ್ಲಿ ಏಕಾಏಕಿ ಭೂಕುಸಿತ, ತಪ್ಪಿದ ಭಾರೀ ಅನಾಹುತ

ದಿಢೀರ್ ಭೂಕುಸಿತವಾಗಿದ್ದರಿಂದ ಸುಳ್ಯದ ಜನತೆ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆದಿದ್ದಾರೆ.

ದಕ್ಷಿಣ ಕನ್ನಡ: ಸುಳ್ಯ ಪೇಟೆಯಲ್ಲಿ ಏಕಾಏಕಿ ಭೂಕುಸಿತ, ತಪ್ಪಿದ ಭಾರೀ ಅನಾಹುತ
ವಿದ್ಯುತ್ ಕಂಬ ಹಾಗೂ ಟ್ರಾನ್ಸ್​​ಫಾರ್ಮರ್ ವಾಲಿರುವುದು ಹಾಗೂ ಧರಾಶಾಯಿಯಾಗಿರುವುದು
TV9 Web
| Edited By: |

Updated on: Nov 03, 2023 | 10:50 PM

Share

ಮಂಗಳೂರು, ನವೆಂಬರ್ 3: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ (Sullia) ಶುಕ್ರವಾರ ರಾತ್ರಿ ಏಕಾಏಕಿ ಭೂಕುಸಿತ (Landslide) ಸಂಭವಿಸಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸುಳ್ಯ ಪೇಟೆಯಲ್ಲಿರುವ ‘ಪರಿವಾರಕಾನ ಉಡುಪಿ ಗಾರ್ಡನ್’ ಹೋಟೆಲ್ ಬಳಿ ಭೂಕುಸಿತ ಸಂಭವಿಸಿದೆ. ಭೂಕುಸಿತವಾದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್​ಫಾರ್ಮರ್ ಇತ್ತು. ಭುಕುಸಿತವಾದ ಬೆನ್ನಲ್ಲೇ ಟ್ರಾನ್ಸ್​ಫಾರ್ಮರ್ ಧರಾಶಾಯಿಯಾಗಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಹಾಗೂ ಟ್ರಾನ್ಸ್​ಫಾರ್ಮರ್ ಬೀಳುವ ಸಂದರ್ಭ ಪವರ್ ಕಟ್ ಆಗಿದ್ದ ಕಾರಣ ದುರಂತ ತಪ್ಪಿದೆ.

ದಿಢೀರ್ ಭೂಕುಸಿತವಾಗಿದ್ದರಿಂದ ಸುಳ್ಯದ ಜನತೆ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆದಿದ್ದಾರೆ.

ಇದನ್ನೂ ಓದಿ: ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ: ಪತಿಯೇ ಕೊಲೆಗೈದಿರುವ ಶಂಕೆ

ಈ ಮಧ್ಯೆ, ಸುಳ್ಯವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಮಳೆಯಾಗಿದೆ.

ನೆರೆಯ ಕೊಡಗು ಜಿಲ್ಲೆಯಲ್ಲಿಯೂ ಶುಕ್ರವಾರ ಸಂಜೆ ಹಾಗೂ ರಾತ್ರಿ ಭಾರೀ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ಸುತ್ತಮುತ್ತ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ‌ ನಗರ, ಮೇಕೇರಿ, ಕಗ್ಗೋಡ್ಲು, ತಾಳತ್ಮನೆ ಸುತ್ತಮುತ್ತ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?