AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ಸುಳ್ಯ ಪೇಟೆಯಲ್ಲಿ ಏಕಾಏಕಿ ಭೂಕುಸಿತ, ತಪ್ಪಿದ ಭಾರೀ ಅನಾಹುತ

ದಿಢೀರ್ ಭೂಕುಸಿತವಾಗಿದ್ದರಿಂದ ಸುಳ್ಯದ ಜನತೆ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆದಿದ್ದಾರೆ.

ದಕ್ಷಿಣ ಕನ್ನಡ: ಸುಳ್ಯ ಪೇಟೆಯಲ್ಲಿ ಏಕಾಏಕಿ ಭೂಕುಸಿತ, ತಪ್ಪಿದ ಭಾರೀ ಅನಾಹುತ
ವಿದ್ಯುತ್ ಕಂಬ ಹಾಗೂ ಟ್ರಾನ್ಸ್​​ಫಾರ್ಮರ್ ವಾಲಿರುವುದು ಹಾಗೂ ಧರಾಶಾಯಿಯಾಗಿರುವುದು
TV9 Web
| Edited By: |

Updated on: Nov 03, 2023 | 10:50 PM

Share

ಮಂಗಳೂರು, ನವೆಂಬರ್ 3: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ (Sullia) ಶುಕ್ರವಾರ ರಾತ್ರಿ ಏಕಾಏಕಿ ಭೂಕುಸಿತ (Landslide) ಸಂಭವಿಸಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸುಳ್ಯ ಪೇಟೆಯಲ್ಲಿರುವ ‘ಪರಿವಾರಕಾನ ಉಡುಪಿ ಗಾರ್ಡನ್’ ಹೋಟೆಲ್ ಬಳಿ ಭೂಕುಸಿತ ಸಂಭವಿಸಿದೆ. ಭೂಕುಸಿತವಾದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್​ಫಾರ್ಮರ್ ಇತ್ತು. ಭುಕುಸಿತವಾದ ಬೆನ್ನಲ್ಲೇ ಟ್ರಾನ್ಸ್​ಫಾರ್ಮರ್ ಧರಾಶಾಯಿಯಾಗಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಹಾಗೂ ಟ್ರಾನ್ಸ್​ಫಾರ್ಮರ್ ಬೀಳುವ ಸಂದರ್ಭ ಪವರ್ ಕಟ್ ಆಗಿದ್ದ ಕಾರಣ ದುರಂತ ತಪ್ಪಿದೆ.

ದಿಢೀರ್ ಭೂಕುಸಿತವಾಗಿದ್ದರಿಂದ ಸುಳ್ಯದ ಜನತೆ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆದಿದ್ದಾರೆ.

ಇದನ್ನೂ ಓದಿ: ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ: ಪತಿಯೇ ಕೊಲೆಗೈದಿರುವ ಶಂಕೆ

ಈ ಮಧ್ಯೆ, ಸುಳ್ಯವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಮಳೆಯಾಗಿದೆ.

ನೆರೆಯ ಕೊಡಗು ಜಿಲ್ಲೆಯಲ್ಲಿಯೂ ಶುಕ್ರವಾರ ಸಂಜೆ ಹಾಗೂ ರಾತ್ರಿ ಭಾರೀ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ಸುತ್ತಮುತ್ತ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ‌ ನಗರ, ಮೇಕೇರಿ, ಕಗ್ಗೋಡ್ಲು, ತಾಳತ್ಮನೆ ಸುತ್ತಮುತ್ತ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು