ದಕ್ಷಿಣ ಕನ್ನಡ: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳಕ್ಕೆ ಮತ್ತೆ ನಿಷೇಧದ ತೂಗುಕತ್ತಿ, ಜಿಲ್ಲಾ ಪಶುಸಂಗೋಪನಾ ಇಲಾಖೆಯಿಂದ ನೋಟಿಸ್

ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ ನಿಷೇಧದ ಭೀತಿಯ ನಡುವೆಯೇ ನಡೆಯುತ್ತಿದೆ. ಇದೀಗ ಕಂಬಳದಲ್ಲಿ ಸುಪ್ರೀಂ ಆದೇಶವನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಕಂಬಳದಲ್ಲಿ ಕೋಣಗಳಿಗೆ ರಕ್ತಬರುವಂತೆ ಬಾರುಕೋಲಿನಲ್ಲಿ ಹೊಡೆಯಲಾಗಿದೆ ಎಂದು ಫೋಟೋ, ವಿಡಿಯೋವನ್ನು ದಾಖಲಿರಿಸಿ ಪಸುಸಂಗೋಪನಾ ಇಲಾಖೆ ಜಿಲ್ಲಾ ಕಂಬಳ ಸಮಿತಿಗೆ ನೊಟೀಸ್ ಕಳುಹಿಸಿದೆ.

ದಕ್ಷಿಣ ಕನ್ನಡ: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳಕ್ಕೆ ಮತ್ತೆ ನಿಷೇಧದ ತೂಗುಕತ್ತಿ, ಜಿಲ್ಲಾ ಪಶುಸಂಗೋಪನಾ ಇಲಾಖೆಯಿಂದ ನೋಟಿಸ್
ಕಂಬಳ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 28, 2023 | 5:05 PM

ಮಂಗಳೂರು: ಹಲವು ಆತಂಕ, ನಿಷೇಧದ ಭೀತಿ ನಡುವೆಯು ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯಲ್ಲಿ ಕಂಬಳ ಕ್ರೀಡೆ ಆಯೋಜನೆಯಾಗುತ್ತಿದೆ. ಹೀಗೆ ಪ್ರತಿಯೊಂದು ಕಡೆಯು ನಡೆಯುತ್ತಿರುವ ಈ ಕಂಬಳದ ಮೇಲೆ ಪ್ರಾಣಿದಯಾ ಸಂಘ ಪೇಟಾ ಕಣ್ಣಿಟ್ಟಿದ್ದು, ಇದೀಗ ಮತ್ತೆ ಕಂಬಳದಲ್ಲಿ ಹಿಂಸಾಚಾರ ನಡೆಯುತ್ತಿರುವ ಬಗ್ಗೆ ದೂರು ನೀಡಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡುತ್ತಿರುವುದಾಗಿ ಆರೋಪಿಸಿದೆ. ಹೀಗಾಗಿ ದಕ್ಷಿಣಕನ್ನಡ ಜಿಲ್ಲಾ ಪಶುಸಂಗೋಪನಾ ಇಲಾಖೆ ಜಿಲ್ಲಾ ಕಂಬಳ ಸಮಿತಿಗೆ ನೊಟೀಸ್ ಜಾರಿ ಮಾಡಿದ್ದು, ಡಿ.31ರಂದು ಮುಲ್ಕಿಯಲ್ಲಿ ನಡೆದ ಕಂಬಳದಲ್ಲಿ ಕೋಣಗಳಿಗೆ ರಕ್ತಬರುವಂತೆ ಬಾರುಕೋಲಿನಲ್ಲಿ ಹೊಡೆಯಲಾಗಿದೆ. ಈ ಬಗ್ಗೆ ಫೋಟೋ, ವಿಡಿಯೋವನ್ನು ದಾಖಲಿರಿಸಿ ನ್ಯಾಯಾಲಯದ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿರುವುದಾಗಿ ಎಚ್ಚರಿಸಿದೆ.

ಕೋಣಗಳನ್ನು ಓಟಕ್ಕೆ ಸಿದ್ಧಪಡಿಸುವಾಗ, ಕೆರೆ ಬಿಟ್ಟು ದಡ ಸೇರಿದ ಬಳಿಕ ಕೋಣಗಳಿಗೆ ಹೊಡೆಯುವ ದೃಶ್ಯ ಪೇಟಾ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಂಬಳದಲ್ಲಿ ನಡೆಯುವ ಪ್ರಮಾದಗಳೇ ಪೇಟಾಗೆ ಆಹಾರವಾಗುವ ಆತಂಕವಿದೆ. ಸದ್ಯ ಸುಪ್ರೀಂ ಕೋರ್ಟ್‌ನ ಪಂಚ ಸದಸ್ಯರ ಪೀಠದಲ್ಲಿ ಕಂಬಳ ನಿಷೇಧದ ವಾದ-ಪ್ರತಿವಾದ ನಡೆಯುತಿದ್ದು ಕಂಬಳದ ಋಣಾತ್ಮಕ ವಿಚಾರವನ್ನು ಪೇಟಾ ಪೀಠದ ಮುಂದೆ ಇಡುತ್ತಿದೆ. ಇನ್ನು ಕಂಬಳ ಸಮಿತಿಯ ನಿರ್ಣಯದ ಪ್ರಕಾರ ಕನಿಷ್ಠ 24-30 ಗಂಟೆಯೊಳಗೆ ಕಂಬಳ ಮುಗಿಯಬೇಕು ಆದರೆ ಕೆಲವಡೆ ಕಂಬಳ 35 ಗಂಟೆ ಮೀರಿ ನಡೆಯುತ್ತಿದೆ. ಹೀಗಾಗಿ ಕಂಬಳದಲ್ಲಿ ಕಾನೂನು ಉಲ್ಲಂಘನೆ ತಪ್ಪು ಎಂದು ಕಂಬಳ ಸಮಿತಿ ಹೇಳಿದೆ. ಕಂಬಳ‌ ನಡೆಯುವ ಸಂಧರ್ಭದಲ್ಲಿ ಮೈಕ್ ಮೂಲಕ ಸೂಚನೆ ಕೊಡಲಾಗುತ್ತಿದೆ. ಆದರು ಕೆಲವರು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಮುಂದೆ ಈ ರೀತಿಯ ಘಟನೆಗಳು ನಡೆದರೆ ಕಂಬಳ ಕೋಣಗಳ ಮಾಲಕರು, ಓಡಿಸುವವರೇ ಜವಾಬ್ದಾರಿ ಎಂದು ಕಂಬಳ ಸಮಿತಿ ಹೇಳಿದೆ.

ಇದನ್ನೂ ಓದಿ:ಮಂಗಳೂರು: ಮುಳುಗಿದ ಹಡಗಿನ ಒಡೆಯುವ ಕಾರ್ಯ ಆರಂಭ, ಗುಜರಿ ಸೇರಲಿದೆ ಡ್ರೆಜ್ಜರ್ ನೌಕೆ ‘ಭಗವತಿ ಪ್ರೇಮ್’

ರಾಜ್ಯ ಸರ್ಕಾರ ಮಂಡಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದರಿಂದ ಸದ್ಯ ಕಂಬಳ ಕ್ರೀಡೆ ನಡೆಯುತ್ತಿದೆ. ಆದರೆ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕಂಬಳ ನಡೆಸಿದ್ರೆ ಮುಂದೆ ಕಂಬಳ ನಿಷೇಧವಾಗುವ ಸಾಧ್ಯತೆಯಿದೆ. ಹೀಗಾಗಿ ಕಂಬಳ ಕೋಣಗಳ ಮಾಲೀಕರು, ಕೋಣ ಓಡಿಸುವವರು ಮುನ್ನೆಚ್ಚರಿಕೆ ವಹಿಸುವುದು ಒಳಿತು.

ವರದಿ: ಅಶೋಕ್ ಟಿವಿ9 ಮಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಕನಸಿನಲ್ಲಿ ಅಕ್ಷತೆ ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಅಕ್ಷತೆ ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 28 ರಿಂದ ನವೆಂಬರ್​ 03ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 28 ರಿಂದ ನವೆಂಬರ್​ 03ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ
Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ