AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ

ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರಿನ  ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ
ಮಂಗಳೂರಿನ ಪ್ರತಿಷ್ಠಿತ ಹೋಟೆಲ್​ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್‌ ಅಧಿಕಾರಿ ಮೃತ ದೇಹ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Sep 11, 2023 | 10:18 AM

Share

ಮಂಗಳೂರು, ಸೆಪ್ಟೆಂಬರ್​ 11: ಕರಾವಳಿ ನಗರಿಯ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಮೃತ ದೇಹ (Dead body) ಪತ್ತೆಯಾಗಿದೆ. ಮಂಗಳೂರಿನ (Mangalore) ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ (Swimming Pool) ಮುಳುಗಿ‌ ಬ್ಯಾಂಕ್‌ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.

ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Also Read:  ರಾಯಚೂರು ನಗರಸಭೆಯಲ್ಲಿನ ಲಂಚಾವತಾರ ಬಯಲು ಮಾಡಿದ ಸಾರ್ವಜನಿಕರು, ವಿಡಿಯೋ ವೈರಲ್

ಬ್ಯಾಂಕ್‌ ಅಧಿಕಾರಿ ಮದ್ಯ ಸೇವಿಸಿ ಸ್ವಿಮ್ಮಿಂಗ್?

ಹೊಟೇಲ್ ನ ಈಜುಕೊಳದಲ್ಲಿ ಮೃತದೇಹ ಪತ್ತೆಯಾಗಿದ್ದು, 11 ಅಡಿ ಆಳದಲ್ಲಿದ್ದ ಗೋಪು ಆರ್ ನಾಯರ್ ಮೃತದೇಹವನ್ನು ಮುಳುಗು ತಜ್ಞರು ಹೊರತೆಗೆದಿದ್ದಾರೆ. ಈಜುತ್ತಿರುವಾಗ ಮೇಲೆ ಬರಲು ಸಾಧ್ಯವಾಗದೆ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಹೊಟೇಲ್ ರೂಂನಲ್ಲಿ ಮದ್ಯ ಸೇವಿಸಿ ಸ್ವಿಮ್ಮಿಂಗ್ ಫೂಲ್ ಗೆ ಇಳಿದಿರುವ ಅನುಮಾನವಿದೆ. ರೂಮ್ ನಲ್ಲಿ ಖಾಲಿಯಾದ ಮದ್ಯ ಬಾಟಲಿ, ಫುಡ್ ಪತ್ತೆಯಾಗಿದೆ.

ಭೀಮನಕಟ್ಟೆ ಬಳಿ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಇಬ್ಬರು ನೀರುಪಾಲು:

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ನಡೆದಿದೆ.

ಬೆಂಗಳೂರು ಮೂಲದ ಗೌತಮ್ (26), ಸುಜಯ್ (28) ನೀರು‌ ಪಾಲಾದ ಯುವಕರು. ಈ ಯುವಕರಿಬ್ಬರೂ ತೀರ್ಥಹಳ್ಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು. ನಿನ್ನೆ ಭಾನುವಾರ ಸಂಜೆ ನದಿಯಲ್ಲಿ ಈಜಲು ತೆರಳಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಈಜುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌತಮ್ (26) ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವಕ ಸುಜಯ್ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Mon, 11 September 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ