AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಪ್ಪನ ಶೂಟೌಟ್​ನಲ್ಲಿ ಗಾಯಗೊಂಡಿದ್ದ ಬಾಲಕ ಸಾವು

ಗುಂಡಿನ ದಾಳಿಗೆ ಒಳಗಾದ ಬಾಲಕ ಸುಧೀಂದ್ರ ಪ್ರಭು (14) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಾಯಾಳು ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಂದೆ ರಾಜೇಶ್ ಪ್ರಭು, ಮಗನ ಮೇಲೆ ಗುಂಡು ಹಾರಿಸಿದ್ದರು.

ಮಂಗಳೂರು: ಅಪ್ಪನ ಶೂಟೌಟ್​ನಲ್ಲಿ ಗಾಯಗೊಂಡಿದ್ದ ಬಾಲಕ ಸಾವು
ಸುಧೀಂದ್ರ ಪ್ರಭು (14)
TV9 Web
| Edited By: |

Updated on:Oct 08, 2021 | 10:25 AM

Share

ಮಂಗಳೂರು: ಅಪ್ಪನೇ ಮಗನ ಮೇಲೆ ಫೈರಿಂಗ್ ಮಾಡಿದ ಘಟನೆ ಅಕ್ಟೋಬರ್ 5 ರಂದು ಮಂಗಳೂರು ನಗರದ ಮಾರ್ಗನ್ಸ್ ಗೇಟ್ ಸಮೀಪ ನಡೆದಿತ್ತು. ಗುಂಡಿನ ದಾಳಿಗೆ ಒಳಗಾದ ಬಾಲಕ ಸುಧೀಂದ್ರ ಪ್ರಭು (14) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಾಯಾಳು ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಂದೆ ರಾಜೇಶ್ ಪ್ರಭು, ಮಗನ ಮೇಲೆ ಗುಂಡು ಹಾರಿಸಿದ್ದರು.

ವೇತನದ ವಿಚಾರಕ್ಕೆ ಮಾಲೀಕ ರಾಜೇಶ್ ಪ್ರಭು ಬಳಿ ಇಬ್ಬರು ಸಿಬ್ಬಂದಿಗಳು ಜಗಳ ಮಾಡಿದ್ದರು. ಚಂದ್ರು ಮತ್ತು ಅಶ್ರಫ್ ಎಂಬ ಸಿಬ್ಬಂದಿ ರಾಜೇಶ್ ಜೊತೆ ಗಲಾಟೆ ಮಾಡಿದ್ದರು. ಈ ವೇಳೆ ರಾಜೇಶ್ ಪುತ್ರ ಸುಧೀಂದ್ರ ಪ್ರಭು ಸಿಬ್ಬಂದಿ ಜೊತೆ ಜಗಳಕ್ಕೆ ಇಳಿಯುತ್ತಾನೆ. ಆಗ ರಾಜೇಶ್ ಕೈಯಲ್ಲಿದ್ದ ಲೈಸೆನ್ಸ್ ರಿವಾಲ್ವರ್​ನಿಂದ ಅಚಾನಕ್ ಆಗಿ ಗುಂಡು ಹಾರಿದೆ.

ಈ ಪರಿಣಾಮ ಮಗ ಸುಧೀಂದ್ರ ತಲೆ ಭಾಗಕ್ಕೆ ಗಂಭೀರ ಗಾಯವಾಗುತ್ತದೆ. ಕಚೇರಿ ಹೊರಭಾಗದ ಸಿಸಿಟಿವಿಯಲ್ಲಿ ಚಲನವಲನಗಳು ಸೆರೆಯಾಗಿದ್ದು, ಘಟನೆ ಬಗ್ಗೆ ಪೊಲೀಸ್ ವಿಚಾರಣೆ ವೇಳೆ ರಾಜೇಶ್ ಪ್ರಭು ಮಾಹಿತಿ ನೀಡಿದ್ದಾರೆ. ವೈಷ್ಣವಿ ಖಾರ್ಗೋ ಲಿಮಿಟೆಡ್ ಕಂಪನಿ‌ ಮಾಲೀಕ ರಾಜೇಶ್ ಪ್ರಭು ಅನ್ನು ನಿನ್ನೆ (ಅಕ್ಟೋಬರ್ 7) ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಹತ್ತು ರೌಡಿಗಳು ಅಂದರ್

ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ

Published On - 10:24 am, Fri, 8 October 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ