AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದಿಂದ ಮಂಗಳೂರಿನಿಂದ ಬೆಂಗಳೂರು ಬೃಹತ್​ ಪಾದಯಾತ್ರೆ ಚಾಲನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಲ್ಲವ, ಈಡಿಗ ಕಲಬುರ್ಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆಗೆ ಇಂದು(ಜ.6) ಚಾಲನೆ ನೀಡಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದಿಂದ ಮಂಗಳೂರಿನಿಂದ ಬೆಂಗಳೂರು ಬೃಹತ್​ ಪಾದಯಾತ್ರೆ ಚಾಲನೆ
ಬಿಲ್ಲವ ಸಮುದಾಯದ ಪಾದಯಾತ್ರೆಗೆ ಚಾಲನೆImage Credit source: nammakudlanews.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 06, 2023 | 9:34 PM

Share

ಮಂಗಳೂರು: ಬಿಲ್ಲವ (Billava community) ಈಡಿಗ, ನಾಮಧಾರಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರ್ಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆಗೆ ಇಂದು(ಜ.6) ಚಾಲನೆ ನೀಡಲಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ರಥಕ್ಕೆ ಬಾವುಟ ನೀಡಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಮಂಗಳೂರಿನಿಂದ ಹೊರಟು 41 ದಿನಗಳ ಕಾಲ 658 ಕಿ.ಮೀ ಸಾಗಲಿರುವ ಪಾದಯಾತ್ರೆ ಉಡುಪಿ, ಶಿವಮೊಗ್ಗ ಮೂಲಕ ಬೆಂಗಳೂರಿಗೆ ಪಾದಯಾತ್ರೆ ಆಗಮಿಸಲಿದೆ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದ ಹಲವು ಜಿಲ್ಲೆಯ ಪ್ರಮುಖರು, ಜನಾರ್ದನ ಪೂಜಾರಿ, ಚಿತ್ರನಟರಾದ ಸುಮನ್ ತಲ್ವಾರ್, ರಾಜಶೇಖರ ಕೋಟ್ಯಾನ್, ತೆಲಂಗಾಣ ಸರ್ಕಾರದ ಸಚಿವ ಶ್ರೀನಿವಾಸ್, ಎಂಎಲ್​ಸಿ ಹರೀಶ್ ಕುಮಾರ್ ಸೇರಿ ಹಲವರು‌‌ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಈಡಿಗ-ಬಿಲ್ಲವ ಮೀಸಲಾತಿ ಹಕ್ಕೊತ್ತಾಯ: ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಸ್ಫೋಟ

ಡಾ. ಪ್ರಣವಾನಂದ ಸ್ವಾಮೀಜಿ ಮಾತನಾಡಿ, ಈ ಪಾದಯಾತ್ರೆ ನಮ್ಮ ಸಮುದಾಯದ ಹಿತಕ್ಕಾಗಿ. ನಮ್ಮ ಬೇಡಿಕೆಗಳಲ್ಲಿ ಯಾವುದೇ ಒಂದನ್ನ ಸರ್ಕಾರ ಪರಿಗಣಿಸದೆ ಹೋದರೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಈ ಹಿಂದೆ ಇದೇ ಸರ್ಕಾರ ನಮ್ಮ ಸಮುದಾಯಕ್ಕೆ ಮೋಸ ಮಾಡಿದೆ. ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ ಸಮಸ್ತ ಸಮುದಾಯದ ಹಿತಾಸಕ್ತಿಯ ವಿರುದ್ಧವಾಗಿ ಸರ್ಕಾರದ ನಿಗಮ ಕಾರ್ಯ ನಿರ್ವಹಿಸಿದರೆ ಆ ನಿಗಮವನ್ನು ಬಂದ್​ ಮಾಡಲು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪುಮುಖ ಬೇಡಿಕೆಗಳು ಹೀಗಿವೆ

  • ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಮಾಡಿ 500 ಕೋಟಿ ರೂ. ಮೀಸಲಿಡಬೇಕು.
  • ರಾಜ್ಯಾದ್ಯಂತ ಕುಲಕಸುಬು ಶೇಂದಿ ಇಳಿಸಿ ಮಾರಾಟ ಮಾಡುವುದಕ್ಕೆ ಅನುಮತಿ ನೀಡಬೇಕು.
  • ಮಂಗಳೂರು, ಉಡುಪಿ, ಶಿವಮೊಗ, ಹಲವಾರ ಜಿಲ್ಲೆಗಳಲ್ಲಿ ಸಮಾಜಕ್ಕೆ ಹಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡಬೇಕು.
  • 2ಎ ವರ್ಗದಲ್ಲಿರುವ ನಮ್ಮ ಸಮುದಾಯಕ್ಕೆ ಯಾವುದೇ ಅನ್ಯಾಯವಾಗದಂತೆ ಮೀಸಲಾತಿ ಹಚ್ಚಿಸುವುದು
  • ಈಡಿಗ ಸಮುದಾಯದ ನೇತೃತ್ವದಲ್ಲಿ ನಡೆಯುವ ಶ್ರೀ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ಮೇಲೆ ಸರಕಾರದ ಹಸ್ತಕ್ಷೇಪ ನಿಲ್ಲಿಸಬೇಕು.
  • ಮೂರ್ತದಾರರಿಗೆ (ಶೇಂದಿ ಇಳಿಸುವರಿಗೆ) ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಹಾಗೂ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಿಸಬೇಕು.
  • ರಾಜ್ಯದ ರಾಜಧಾನಿಯಲ್ಲಿ ಮಹಾನ್‌ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಮೂರ್ತಿ ಸ್ಥಾಪನೆ.
  • ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ನಾರಾಯಣ ಗುರುಗಳ ಅಧ್ಯಯನ ಪೀಠ ಮಾಡಬೇಕು.
  • ಸರಕಾರಿ ಗೋಮಾಳ ಹುಲ್ಲುಗಾವಲು ಜಮೀನಿನಲ್ಲಿ ಸರ್ಕಾರಿ ವಚ್ಚದಲ್ಲಿ ಈಚಲು ಮರ, ತೆಂಗಿನ ಮರ, ತಾಳೆ ಮರಗಳನ್ನು ನಡಬೇಕು.
  • 12ನೇ ಶತಮಾನದ ಆನುಭವ ಮಂಟಪದಲ್ಲಿ ಈಡಿಗ ಸಮುದಾಯದ ಶರಣರಾಗಿದ್ದ ಶ್ರೀ ಶರಣ ಧುರಣ ಹೆಂಡದ ಮಾರಯ್ಯನ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:30 pm, Fri, 6 January 23