AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್

ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಕಳೆದ ಕೆಲವು ದಿನಗಳಿಂದ ಬಹಳ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಭರತ್ ಶೆಟ್ಟಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್
ವೈ ಭರತ್ ಶೆಟ್ಟಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jul 10, 2024 | 12:56 PM

Share

ಮಂಗಳೂರು, ಜುಲೈ 10: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಧ್ಯೆ, ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ. ರಸ್ತೆ ತಡೆಯಿಂದ ಲಾಲ್ ಭಾಗ್ ಸರ್ಕಲ್ ಬಳಿ ಟ್ರಾಫಿಕ್ ಜಾಂ ಉಂಟಾಯಿತು. ಬಳಿಕ ರಸ್ತೆ ತಡೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಪಕ್ಕಕ್ಕೆ ಸರಿಸಿದರು.

ಏನು ಹೇಳಿದ್ದರು ಭರತ್ ಶೆಟ್ಟಿ?

ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ ಎಂದಿದ್ದರು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗಬಹುದು ಅಂತ ಗೊತ್ತಿಲ್ಲ ಎಂದು ಭರತ್ ಶೆಟ್ಟಿ ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ದೊಡ್ಡ ಹುಚ್ಚ, ಪಾರ್ಲಿಮೆಂಟ್​ಗೆ ಹೋಗಿ ಅವನ ಕೆನ್ನೆಗೆ ಬಾರಿಸಬೇಕು: ಭರತ್ ಶೆಟ್ಟಿ ಹೇಳಿಕೆಗೆ ವ್ಯಾಪಕ ವಿರೋಧ

ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ವ್ಯಕ್ತಿಯನ್ನು ನಿಂದಿಸಿದ ಬಗ್ಗೆ ಅವರ ವಿರುದ್ಧ ದೂರು ದಾಖಲಾಗಿತ್ತು. ಶಸ್ತ್ರಾಸ್ತ್ರ ಉಪಯೋಗಿಸಿ ಹೋರಾಟ ಮಾಡೋಣ ಎಂದು ಪ್ರಚೋದನಕಾರಿ ಹೇಳಿಕೆ‌‌‌ ನೀಡಿದ್ದಾರೆ ಎಂದೂ ಆರೋಪಿಸಲಾಗಿತ್ತು. ಶಾಸಕರ ಹೇಳಿಕೆಯನ್ನು ಬೆಂಬಲಿಸಿದ ಶಾಸಕ ವೇದವ್ಯಾಸ್ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕಾರ್ಪೋರೇಟರ್​​ಗಳ ವಿರುದ್ಧವೂ ಸೂಕ್ತ ಕ್ರಮಕ್ಕೆ ದೂರುದಾರರು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Wed, 10 July 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?