ಧರ್ಮಸ್ಥಳ ಕೇಸ್: ಗುಂಡಿ ಅಗೆದಾಗ ಅದು ಸಿಕ್ತು ಇದು ಸಿಕ್ತು ಎನ್ನುತ್ತಿದ್ದ ವಕೀಲಗೆ ಸಂಕಷ್ಟ

ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಮಾಹಿತಿ ಹಬ್ಬಿಸಿದ್ದ ವಕೀಲ ಮಂಜುನಾಥ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಘುರಾಮ ಶೆಟ್ಟಿ ಅವರ ದೂರಿನ ಮೇರೆಗೆ ಈ ಎಫ್ಐಆರ್ ದಾಖಲಾಗಿದ್ದು, ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಕೀಲ ಮಂಜುನಾಥ್ ಜುಲೈ 30 ರಂದು ಮಾಧ್ಯಮ ಪ್ರಕಟಣೆಯ ಮೂಲಕ ಈ ಸುಳ್ಳು ಮಾಹಿತಿ ಹಬ್ಬಿಸಿದ್ದರು.

ಧರ್ಮಸ್ಥಳ ಕೇಸ್: ಗುಂಡಿ ಅಗೆದಾಗ ಅದು ಸಿಕ್ತು ಇದು ಸಿಕ್ತು ಎನ್ನುತ್ತಿದ್ದ ವಕೀಲಗೆ ಸಂಕಷ್ಟ
ಮಾಧ್ಯಮ ಪ್ರಕಟಣೆ, ಎಸ್​ಐಟಿ
Edited By: ವಿವೇಕ ಬಿರಾದಾರ

Updated on: Aug 22, 2025 | 9:49 PM

ಮಂಗಳೂರು, ಆಗಸ್ಟ್​ 22: ಧರ್ಮಸ್ಥಳದಲ್ಲಿ (Dharmasthala) ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ವಿಚಾರವಾಗಿ ಸುಳ್ಳು ಮಾಹಿತಿ ನೀಡಿದ್ದ ವಕೀಲ ಮಂಜುನಾಥ್ ವಿರುದ್ಧ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ (Belthangady Police) ಎಫ್ಐಆರ್‌ ದಾಖಲಾಗಿದೆ. ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ನೀಡಿದ ದೂರು ಆಧರಿಸಿ ಎಫ್​ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್​ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ವಕೀಲ ಮಂಜುನಾಥ್​ ಹೇಳಿದ್ದೇನು?

ಪಾಯಿಂಟ್ ನಂಬರ್ 1ರಲ್ಲಿ 2 ಹೆಣ, ಪಾಯಿಂಟ್ ನಂ 2, 3ರಲ್ಲಿ ತಲಾ 2 ಹೆಣ‌, ಪಾಯಿಂಟ್ ನಂಬರ್‌ 4 ಮತ್ತು 5ರಲ್ಲಿ ತಲಾ 6 ಹೆಣ,  ಪಾಯಿಂಟ್ ನಂಬರ್​ 6, 7ರಲ್ಲಿ ತಲಾ 8 ಹೆಣ, ಪಾಯಿಂಟ್​ ನಂಬರ್ 9ರಲ್ಲಿ 6-7 ಹೆಣ, ಪಾಯಿಂಟ್ ನಂಬರ್ 10ರಲ್ಲಿ 3, 11ರಲ್ಲಿ 9 ಹೆಣ,. ಪಾಯಿಂಟ್ ನಂಬರ್​ ​12ರಲ್ಲಿ 4-5 ಹೆಣ ಪಾಯಿಂಟ್ ನಂ 13ರಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದನು. ಈ ಸಂಬಂಧ ರಘುರಾಮ ಶೆಟ್ಟಿ ಅವರು ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ, ಬಿಎನ್​ಎಸ್​ ಕಾಯ್ದೆ 353(1)ಬಿ, 353(2)ರ ಅಡಿ ಎಫ್ಐಆರ್‌ ದಾಖಲಾಗಿದೆ.

ಇದನ್ನೂ ಓದಿ: ಯೂಟ್ಯೂಬರ್‌ ಬಂಧನಕ್ಕೆ ಬಲೆ ಬೀಸಿದ ಪೊಲೀಸರು, ಸಿನಿಮೀಯ ರೀತಿಯಲ್ಲಿ ಸಮೀರ್ ಪರಾರಿ

ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ಅನಾಮಿಕನ ವಿಚಾರಣೆ

ಉತ್ಖನನ ಕಾರ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ. ಶೋಧ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ, ಎಸ್ಐಟಿ ತನಿಖೆ ನಿಂತಿಲ್ಲ. ಅನಾಮಿಕ ದೂರುದಾರನನ್ನು ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಮತ್ತೊಬ್ಬ ದೂರುದಾರ ಜಯಂತ್ ಕೂಡಾ ಎಸ್ಐಟಿ ಕಚೇರಿಗೆ ಬಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Fri, 22 August 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us