AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಚಿನ್ನಯ್ಯನನ್ನು ಮತ್ತೆ 3 ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್!

ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು ಮತ್ತೆ ಮೂರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 6 ರಂದು ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಲಾಗಿದೆ. ಸದ್ಯ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಚಿನ್ನಯ್ಯನನ್ನು ಮತ್ತೆ 3 ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್!
ಚಿನ್ನಯ್ಯ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 03, 2025 | 5:53 PM

Share

ಮಂಗಳೂರು, ಸೆಪ್ಟೆಂಬರ್​​ 03: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ (Dharmasthala Case) ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಮತ್ತೆ ಹಾಜರುಪಡಿಸಲು ಕೋರ್ಟ್ ಅಧಿಕಾರಿಗಳಿಗೆ​ ಸೂಚನೆ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ ದೂರುದಾರ ಸಿಎನ್ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಇಂದು ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನಲೆ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಅಧಿಕೃತವಾಗಿ ED ಎಂಟ್ರಿ, ತನಿಖೆ ಶುರುವಾಗಿದ್ದು ಎಲ್ಲಿಂದ ಗೊತ್ತಾ?

ಇದನ್ನೂ ಓದಿ
Image
ಧರ್ಮಸ್ಥಳ ಕೇಸ್​​: ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟ ಸುರೇಶ್ ಕುಮಾರ್
Image
ಧರ್ಮಸ್ಥಳ ಪ್ರಕರಣದಲ್ಲಿ ED ಎಂಟ್ರಿ, ತನಿಖೆ ಶುರುವಾಗಿದ್ದು ಎಲ್ಲಿಂದ?
Image
ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
Image
ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಕೋರ್ಟ್ ಹಾಲ್​ನ ಬಾಗಿಲು ಮುಚ್ಚಿ ವಿಚಾರಣೆ ಮಾಡಲಾಗಿದೆ. ಸರ್ಕಾರಿ ಅಭಿಯೋಜಕರಿಂದ ಸಾಕ್ಷಿ ಸಂಗ್ರಹಣೆ, ಬಾಕಿ ವಿಚಾರಣೆ ಇತ್ಯಾದಿ ವಿವರಗಳ ತನಿಖೆಯ ಪ್ರಗತಿ ವರದಿ ಸಲ್ಲಿಕೆ ಮಾಡಿದರು.

ಎಸ್ಐಟಿಯಿಂದಲೂ ಕೋರ್ಟ್‌ಗೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲಾಯಿತು. ಕಾನೂನು ಸೇವಾ ಪ್ರಾಧಿಕಾರದ ವಕೀಲರಿಂದ ಚಿನ್ನಯ್ಯ ಪರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿ ತನಿಖಾಧಿಕಾರಿ‌, ಸರ್ಕಾರಿ ಅಭಿಯೋಜಕ, ಚಿನ್ನಯ್ಯ ಮತ್ತು ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಉಪಸ್ಥಿತರಿದ್ದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲೇ ಷಡ್ಯಂತ್ರಕ್ಕೆ ಮಹಾ ಸ್ಕೆಚ್, ಚಿನ್ನಯ್ಯ ಸಮ್ಮುಖದಲ್ಲೇ ಎಸ್​ಐಟಿಯಿಂದ ಮಹಜರು

ಇನ್ನು ಬುರುಡೆ ಕಥೆಗೆ ಬೆನ್ನುಡಿ ಬರೆಯಲೇಬೇಕು ಅಂತ ದಿಟ್ಟ ಹೆಜ್ಜೆ ಇಟ್ಟಿರುವ ಎಸ್​​ಐಟಿ, ಮಾಸ್ಕ್​​ಮ್ಯಾನ್​​ ಚಿನ್ನಯ್ಯನನ್ನ ಜನ್ಮ ಜಾಲಾಡುತ್ತಿದೆ. ನಿನ್ನೆ ಸಂಜೆ ಇದ್ದಕಿದ್ದಂತೆ ಉಜಿರೆ ಕಡೆ ಮುಖ ಮಾಡಿದ್ದ ತನಿಖಾ ತಂಡ, ಉಜಿರೆಯ ಹಳ್ಳಿಮನೆ ಹೋಟೆಲ್​ ಹಾಗೂ ಫ್ಯಾಮಿಲಿ ರೆಸಾರ್ಟ್​ನಲ್ಲಿ ಮಹಜರು ಮಾಡಿದೆ. ಸರಿ ಸುಮಾರು ಎರಡು ಗಂಟೆಗಳ ಕಾಲ ಪರಿಶೀಲನೆ ಮಾಡಿ, ನಂತರ ಚಿನ್ನಯ್ಯನನ್ನ ಬೆಳ್ತಂಗಡಿ ಎಸ್​​ಐಟಿ ಕಚೇರಿಗೆ ವಾಪಸ್​ ಕರೆತಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:35 pm, Wed, 3 September 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ