AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಚಿನ್ನಯ್ಯನನ್ನು ಮತ್ತೆ 3 ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್!

ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು ಮತ್ತೆ ಮೂರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 6 ರಂದು ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಲಾಗಿದೆ. ಸದ್ಯ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಚಿನ್ನಯ್ಯನನ್ನು ಮತ್ತೆ 3 ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್!
ಚಿನ್ನಯ್ಯ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 03, 2025 | 5:53 PM

Share

ಮಂಗಳೂರು, ಸೆಪ್ಟೆಂಬರ್​​ 03: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ (Dharmasthala Case) ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಮತ್ತೆ ಹಾಜರುಪಡಿಸಲು ಕೋರ್ಟ್ ಅಧಿಕಾರಿಗಳಿಗೆ​ ಸೂಚನೆ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ ದೂರುದಾರ ಸಿಎನ್ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಇಂದು ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನಲೆ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಅಧಿಕೃತವಾಗಿ ED ಎಂಟ್ರಿ, ತನಿಖೆ ಶುರುವಾಗಿದ್ದು ಎಲ್ಲಿಂದ ಗೊತ್ತಾ?

ಇದನ್ನೂ ಓದಿ
Image
ಧರ್ಮಸ್ಥಳ ಕೇಸ್​​: ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟ ಸುರೇಶ್ ಕುಮಾರ್
Image
ಧರ್ಮಸ್ಥಳ ಪ್ರಕರಣದಲ್ಲಿ ED ಎಂಟ್ರಿ, ತನಿಖೆ ಶುರುವಾಗಿದ್ದು ಎಲ್ಲಿಂದ?
Image
ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
Image
ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಕೋರ್ಟ್ ಹಾಲ್​ನ ಬಾಗಿಲು ಮುಚ್ಚಿ ವಿಚಾರಣೆ ಮಾಡಲಾಗಿದೆ. ಸರ್ಕಾರಿ ಅಭಿಯೋಜಕರಿಂದ ಸಾಕ್ಷಿ ಸಂಗ್ರಹಣೆ, ಬಾಕಿ ವಿಚಾರಣೆ ಇತ್ಯಾದಿ ವಿವರಗಳ ತನಿಖೆಯ ಪ್ರಗತಿ ವರದಿ ಸಲ್ಲಿಕೆ ಮಾಡಿದರು.

ಎಸ್ಐಟಿಯಿಂದಲೂ ಕೋರ್ಟ್‌ಗೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲಾಯಿತು. ಕಾನೂನು ಸೇವಾ ಪ್ರಾಧಿಕಾರದ ವಕೀಲರಿಂದ ಚಿನ್ನಯ್ಯ ಪರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿ ತನಿಖಾಧಿಕಾರಿ‌, ಸರ್ಕಾರಿ ಅಭಿಯೋಜಕ, ಚಿನ್ನಯ್ಯ ಮತ್ತು ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಉಪಸ್ಥಿತರಿದ್ದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲೇ ಷಡ್ಯಂತ್ರಕ್ಕೆ ಮಹಾ ಸ್ಕೆಚ್, ಚಿನ್ನಯ್ಯ ಸಮ್ಮುಖದಲ್ಲೇ ಎಸ್​ಐಟಿಯಿಂದ ಮಹಜರು

ಇನ್ನು ಬುರುಡೆ ಕಥೆಗೆ ಬೆನ್ನುಡಿ ಬರೆಯಲೇಬೇಕು ಅಂತ ದಿಟ್ಟ ಹೆಜ್ಜೆ ಇಟ್ಟಿರುವ ಎಸ್​​ಐಟಿ, ಮಾಸ್ಕ್​​ಮ್ಯಾನ್​​ ಚಿನ್ನಯ್ಯನನ್ನ ಜನ್ಮ ಜಾಲಾಡುತ್ತಿದೆ. ನಿನ್ನೆ ಸಂಜೆ ಇದ್ದಕಿದ್ದಂತೆ ಉಜಿರೆ ಕಡೆ ಮುಖ ಮಾಡಿದ್ದ ತನಿಖಾ ತಂಡ, ಉಜಿರೆಯ ಹಳ್ಳಿಮನೆ ಹೋಟೆಲ್​ ಹಾಗೂ ಫ್ಯಾಮಿಲಿ ರೆಸಾರ್ಟ್​ನಲ್ಲಿ ಮಹಜರು ಮಾಡಿದೆ. ಸರಿ ಸುಮಾರು ಎರಡು ಗಂಟೆಗಳ ಕಾಲ ಪರಿಶೀಲನೆ ಮಾಡಿ, ನಂತರ ಚಿನ್ನಯ್ಯನನ್ನ ಬೆಳ್ತಂಗಡಿ ಎಸ್​​ಐಟಿ ಕಚೇರಿಗೆ ವಾಪಸ್​ ಕರೆತಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:35 pm, Wed, 3 September 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ