AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಕೇಸ್​: SIT ಮುಂದೆ ಕೊನೆಗೂ ಬುರುಡೆ ರಹಸ್ಯ ಬಿಚ್ಚಿಟ್ಟ ಗಿರೀಶ್ ಮಟ್ಟಣ್ಣವರ್

ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಮಾವ ವಿಠ್ಠಲ್​ಗೌಡನೇ ನಮಗೆ ಬುರುಡೆ ತಂದುಕೊಟ್ಟಿರುವುದು ಎಂದು ಸಾಮಾಜಿಕ ಹೋರಾಟಗಾರ ಗಿರೀಶ್​ ಮಟ್ಟಣ್ಣನವರ್, ಎಸ್​ಐಟಿ ಮುಂದೆ ಸ್ಫೋಟಕ ಹೇಳಿಕೆ ನೀಡಿರುವುದು ಮತ್ತಷ್ಟು ಪ್ರಕರಣ ಗಂಭೀರ ಪಡೆದುಕೊಂಡಿದೆ.

ಧರ್ಮಸ್ಥಳ ಕೇಸ್​: SIT ಮುಂದೆ ಕೊನೆಗೂ ಬುರುಡೆ ರಹಸ್ಯ ಬಿಚ್ಚಿಟ್ಟ ಗಿರೀಶ್ ಮಟ್ಟಣ್ಣವರ್
ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ವಿಠಲ್​ ಗೌಡ​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 07, 2025 | 1:51 PM

Share

ಮಂಗಳೂರು, ಸೆಪ್ಟೆಂಬರ್​ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ.  ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್​​ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್​.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್ ಮಟ್ಟಣ್ಣನವರ್ (Girish Mattannavar) ​​ ಬುರುಡೆ ಕೊಟ್ಟಿರೋದು ಅಂತಾ ಆರೋಪಿಸಿದ್ದರು. ಮೊನ್ನೆ ಗಿರೀಶ್​ ಮಣ್ಣನವರ್​​ನ ವಿಚಾರಣೆ ಮಾಡಿದರೆ ನನಗೇನೂ ಗೊತ್ತಿಲ್ಲ ಅಂದಿದ್ದರು. ಇದೀಗ ಸತತ ನಾಲ್ಕೈದು ದಿನಗಳ ಕಾಲ ವಿಚಾರಣೆ ನಡೆಸಿ ಬೆಂಡೆತ್ತಿದಾಗ, ಸೌಜನ್ಯ ಮಾವ ವಿಠ್ಠಲ್​ ಗೌಡರ ಹೆಸರು ಮುನ್ನೆಲೆಗೆ ಬಂದಿದೆ.

ಮಟ್ಟಣ್ಣನವರ್ ಹೇಳಿಕೆ ಕೇಳಿ ಎಸ್​ಐಟಿಯೇ ಶಾಕ್!

ಧರ್ಮಸ್ಥಳ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಎಸ್​ಐಟಿಗೆ ಬುರುಡೆ ಕಥೆ ಹಿಂದಿನ ಸ್ಫೋಟಕ ಮಾಹಿತಿಗಳೇ ಸಿಗುತ್ತಿವೆ. ಸೌಜನ್ಯ ಮಾವ ವಿಠ್ಠಲ್​ಗೌಡನೇ ನಮಗೆ ಬುರುಡೆ ತಂದುಕೊಟ್ಟಿರುವುದು ಅಂತಾ ಸಾಮಾಜಿಕ ಹೋರಾಟಗಾರ ಗಿರೀಶ್​ ಮಟ್ಟಣ್ಣನವರ್, ಎಸ್​ಐಟಿ ಮುಂದೆ ಸ್ಫೋಟಕ ಹೇಳಿಕೆ ಕೊಟ್ಟಿರೋದು ಮತ್ತಷ್ಟು ಪ್ರಕರಣ ಗಂಭೀರ ಪಡೆದುಕೊಂಡಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್​: ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟಿದ್ದೇ ಸೌಜನ್ಯ ಮಾವ ವಿಠ್ಠಲ ಗೌಡ!

ಇದನ್ನೂ ಓದಿ
Image
ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟಿದ್ದೇ ಸೌಜನ್ಯ ಮಾವ ವಿಠ್ಠಲ ಗೌಡ!
Image
ಧರ್ಮಸ್ಥಳ ಶವ ಹೂತಿಟ್ಟ ಕೇಸ್​: ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ
Image
ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್!
Image
ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲೇ ಷಡ್ಯಂತ್ರಕ್ಕೆ ಮಹಾ ಸ್ಕೆಚ್!

ಗಿರೀಶ್ ಮಟ್ಟಣ್ಣನವರ್ ಹೇಳಿಕೆ ಕೇಳಿ ಎಸ್​ಐಟಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ ಅಂತೆ. ನಮಗೆ ಸೌಜನ್ಯ ಮಾವ ವಿಠ್ಠಲ್​ಗೌಡರೇ ಬುರುಡೆ ತಂದುಕೊಟ್ಟಿರೋದು, ಮಾಸ್ಕ್​ಮ್ಯಾನ್ ಚಿನ್ನಯ್ಯ ತೋರಿಸಿದ 11A ಸ್ಪಾಟ್​ನ ಸ್ವಲ್ಪ ದೂರದಲ್ಲೇ ಬುರುಡೆ ಸಿಕ್ಕಿರೋದು. ಬಂಗ್ಲಗುಡ್ಡ ಕಾಡಿನಿಂದಲೇ ತಂದಿರೋ ಬುರುಡೆಯನ್ನ ನಮಗೆ ಕೊಟ್ಟಿದ್ದಾರೆ ಅಂತಾ ವಿಚಾರಣೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಬಾಯ್ಬಿಟ್ಟಿದ್ದಾರಂತೆ.

ಸೌಜನ್ಯ ಮಾವ ವಿಠಲ್​ ಗೌಡ​ಗೂ ಎಸ್​ಐಟಿ ಗ್ರಿಲ್

ಗಿರೀಶ್​ ಮಟ್ಟಣ್ಣನವರ್ ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸೌಜನ್ಯ ಮಾವ ವಿಠ್ಠಲ್​ಗೌಡರನ್ನ ಎಸ್​ಐಟಿ ಅಧಿಕಾರಿಗಳು ಬೆಂಡೆತ್ತಿದ್ದು, ಹಂತ ಹಂತವಾಗಿ ಬುರುಡೆ ರಹಸ್ಯವನ್ನ ತೆರೆದಿಟ್ಟಿದ್ದಾರೆ. ನನಗೆ ಸ್ಥಳದಲ್ಲಿ ಕೇವಲ ಬುರುಡೆ ಮಾತ್ರ ಸಿಕ್ಕಿರೋದು, ಮರದ ಕೆಳಗೆ ಭೂಮಿ ಮೇಲ್ಭಾಗದಲ್ಲಿ ನನಗೆ ಬುರುಡೆ ಸಿಕ್ಕಿದ್ದು ಅಂತಾ ಎಸ್​ಐಟಿ ವಿಚಾರಣೆಯಲ್ಲಿ ಸೌಜನ್ಯ ಮಾವ ವಿಠ್ಠಲ್​ಗೌಡ ಹೇಳಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ. ಹಾಗಾದರೆ ಇವರು ಹೇಳ್ತಿರೋ ಪ್ರಕಾರ ಬುರುಡೆ ಸಿಕ್ಕಮೇಲೆ ಅಸ್ಥಿಪಂಜರವೂ ಸಿಗಬೇಕು, ಹಾಗಾಗಿ ಎಸ್​ಐಟಿ, ಕಾಡಿನಲ್ಲಿ ಅಸ್ಥಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿದೆ.

ಚಿನ್ನಯ್ಯನನ್ನು ಗ್ಯಾಂಗ್​ಗೆ ಪರಿಚಯಿಸಿದ್ದ ವಿಠಲಗೌಡ

ಇನ್ನು ಇಂಟ್ರಸ್ಟಿಂಗ್ ವಿಚಾರ ಏನಂದರೆ, ಸೌಜನ್ಯ ಮಾವ ಆಗಿರುವ ವಿಠ್ಠಲ್​ಗೌಡನಿಗೆ ಮಾಸ್ಕ್​ಮ್ಯಾನ್​ ಚಿನ್ನಯ್ಯ ಮೊದಲೇ ಪರಿಚಯ ಇರೋ ವಿಚಾರ ಇದೀಗ ಗೊತ್ತಾಗಿದೆ. 2 ವರ್ಷದ ಹಿಂದೆ ಉಜಿರೆಯಲ್ಲಿ ಚಿನ್ನಯ್ಯ ಕೆಲಸ ಮಾಡುತ್ತಿದ್ದ. ಇದೇ ವೇಳೆ ವಿಠ್ಠಲ್​ಗೌಡನ ಕಣ್ಣಿಗೆ ಚಿನ್ನಯ್ಯ ಬಿದ್ದಿದ್ದ. ಇಬ್ಬರ ನಡುವೆಯೂ ಪರಿಚಯ ಕೂಡ ಆಗುತ್ತೆ. ಕಾನೂನು ಪ್ರಕ್ರಿಯೆಗೆ ಒಳಪಟ್ಟ ಅಪರಿಚಿತ ಶವಗಳನ್ನ ಚಿನ್ನಯ್ಯ ಹೂಳ್ತಿರೋ ವಿಚಾರವೂ ವಿಠ್ಠಲ್​ಗೌಡನಿಗೆ ಗೊತ್ತಿತ್ತು. ಇದೇ ವಿಚಾರವನ್ನ ಬಂಡವಾಳ ಮಾಡಿಕೊಂಡ ವಿಠ್ಠಲ್​ಗೌಡ, ಗ್ಯಾಂಗ್​ಗೆ ಚಿನ್ನಯ್ಯನನ್ನ ಪರಿಚಯಿಸುತ್ತಾನೆ. ನಂತರದಲ್ಲಿ ಬುರುಡೆ ಕಥೆ ಕಟ್ಟಿ ಷಡ್ಯಂತ್ರ ಮಾಡಿರುವ ಆರೋಪ ಇದೀಗ ಕೇಳಿ ಬಂದಿದೆ. ಇದೆಲ್ಲವೂ ಎಸ್​ಐಟಿ ವಿಚಾರಣೆಯಲ್ಲಿ ಬಯಲಾಗಿದೆ.

ಬುರುಡೆ ತಂದಿದ್ದು ಯಾವಾಗ ಗೊತ್ತಾ?

ಒಂದು ವರ್ಷದ ಹಿಂದೆ ಈ ಬುರುಡೆ ತರಲಾಗಿದೆ. ಕಳೆದ ಮಳೆಗಾಲದ ವೇಳೆ ಬಂಗ್ಲೆಗುಡ್ಡ ಬಳಿ ವಿಠಲಗೌಡ ಬುರುಡೆ ತಂದಿದ್ದ. ಅಂದಿನಿಂದ ಒಂದು ವರ್ಷಗಳ ಕಾಲ ಬುರುಡೆ ಗ್ಯಾಂಗ್ ಬಳಿ ಇತ್ತು ಎಂಬುವುದು ಎಸ್​ಐಟಿ ವಿಚಾರಣೆ ವೇಳೆ ಬಯಲಾಗಿದೆ.

ಇದನ್ನೂ ಓದಿ: ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ

ಇಷ್ಟೆಲ್ಲಾ ಮಾಹಿತಿ ಸಿಕ್ಕಿದರೂ ಎಸ್​ಐಟಿ ಮಾತ್ರ ವಿಚಾರಣೆಯನ್ನ ನಿಲ್ಲಿಸ್ತಿಲ್ಲ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತೀವ್ರ ವಿಚಾರಣೆ ನಡೆಸುತ್ತಿದೆ. ಮಟ್ಟಣ್ಣನವರ್, ಜಯಂತ್​ಗೆ ಎಸ್​​ಐಟಿ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದೆ. ಜಯಂತ್​ಗೆ 4ನೇ ದಿನವೂ ವಿಚಾರಣೆ ಬಿಸಿ ತಟ್ಟಿದರೆ, ಮಟ್ಟಣ್ಣನವರ್​ಗೆ 3ನೇ ದಿನವೂ ಗ್ರಿಲ್ ಮಾಡಲಾಗ್ತಿದೆ. ವಿಠ್ಠಲ್​ಗೌಡನನ್ನ ನಿನ್ನೆಯಿಂದ ಎಸ್​ಐಟಿ ಠಾಣೆಯಲ್ಲೇ ಇರಿಸಿಕೊಂಡು ವಿಚಾರಣೆ ಮಾಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More